Advertisement
ಭಾನುವಾರ ಜಿಲ್ಲಾ ಗುರುಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಸರಿ ಅಲ್ಲವೇ ಅಲ್ಲ. ನನಗೂ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಯಾವುದೇ ಹುಟ್ಟಲಿ ಬಹಳ ಪ್ರೀತಿಯಿಂದ ಸಾಕಿ ಸಲುಹಬೇಕು ಎಂದರು.
Related Articles
Advertisement
ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಮಾತನಾಡಿ, ಮುಂದಿನ ಮಹಿಳಾ ದಿನಾಚರಣೆ ವೇಳೆಗೆ ವೃದ್ಧಾಶ್ರಮಕ್ಕೆ ಯಾರನ್ನೂ ಕಳಿಸುವುದಿಲ್ಲ. ಹೆಣ್ಣು ಭ್ರೂಣ ಹತ್ಯೆ ಮಾಡುವುದಿಲ್ಲ. 3 ವರ್ಷದವರೆಗೆ ಎದೆಹಾಲು ಕುಡಿಸುತ್ತೇವೆ. ಒಂದೇ ಮಗು ಪಡೆಯುತ್ತೇವೆ ಎಂಬ ಪ್ರತಿಜ್ಞೆ ಮಾಡಬೇಕು ಎಂದು ಮನವಿ ಮಾಡಿದರು.
ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ಮಹಿಳಾ ದಿನಾಚರಣೆಗೆ ಮೂಲ ಕಾರಣ ಹತ್ತಿ ಮಿಲ್ನಲ್ಲಿ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ನಡೆಸಿದಂತ ಮಹಿಳಾ ಕಾರ್ಮಿಕರು. ಮಹಿಳೆಯರಿಗೆ ಗೌರವ…ನೀಡುವುದೇ ಬಹು ಮುಖ್ಯ ಕೊಡುಗೆ. ಅಂಬೇಡ್ಕರ್ರವರ ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂದು ಆಶಿಸಿದರು.
ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ. ಪಾಲಾಕ್ಷಿ ಮಾತನಾಡಿ, ಮಹಿಳೆಯರನ್ನ ನೋಡುವ ದೃಷ್ಟಿಕೋನ ಬದಲಾವಣೆಯ ಮೂಲಕ ಎಲ್ಲಾ ಸಮಸ್ಯೆಗಳಿಗೆ ಇತಿಶ್ರೀ ಹಾಡಬೇಕು ಎಂದರು.
ಮಹಿಳೆಯರ ಸಮಸ್ಯೆಗಳು ಮತ್ತು ಸವಾಲುಗಳು… ವಿಷಯ ಕುರಿತು ರಾಜನಹಳ್ಳಿ ಸೀತಮ್ಮ ಪಿಯು ಕಾಲೇಜಿನ ಉಪನ್ಯಾಸಕಿ ಅರುಣಾಕುಮಾರಿ ಬಿರಾದಾರ್ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಲೋಕೇಶ್ವರಪ್ಪ, ತಾಲೂಕು ಪಂಚಾಯತ್ ಸದಸ್ಯ ಜಿ.ಜಿ. ಸಂಗಜ್ಜಗೌಡ್ರು, ಜಿಲ್ಲಾ ಸ್ರ್ತೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಜಿ.ಸಿ.ಮಂಗಳಾ, ತಾಲೂಕು ಅಧ್ಯಕ್ಷೆ ಶಕುಂತಲ ಇತರರು ಇದ್ದರು. ಸರ್ಕಾರಿ ಅಂಧ ಮಕ್ಕಳ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್ಕುಮಾರ್ ಸ್ವಾಗತಿಸಿದರು. ಪ್ರಶಸ್ತಿ ಪ್ರದಾನ ಮಾಡಲಾಯಿತು.