Advertisement
ಶನಿವಾರ, ಜಿಲ್ಲಾಡಳಿತ ಭವನದಲ್ಲಿ ಜಲಶಕ್ತಿ ಅಭಿಯಾನ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಶಕ್ತಿ ಅಭಿಯಾನ ಐದು ಪ್ರಮುಖ ಕಾರ್ಯಕ್ರಮಗಳನ್ನು ಹೊಂದಿದೆ. ನೀರು ಸಂರಕ್ಷಣೆ ಮತ್ತು ಮಳೆಕೊಯ್ಲು, ಸಾಂಪ್ರದಾಯಿಕ ನೀರಿನ ಮೂಲಗಳ ನವೀಕರಣ, ನೀರಿನ ಮರುಬಳಕೆ ಮತ್ತು ಮರುಪೂರಣ, ಜಲಾನಯನ ಅಭಿವೃದ್ಧಿ ಹಾಗೂ ಅರಣ್ಯೀಕರಣ ಕುರಿತು ಜಿಲ್ಲೆಯಲ್ಲಿ ಸಾಧಿಸಬಹುದಾದಂತಹ ಕ್ರಿಯಾ ಯೋಜನೆ ರಚಿಸಲು ಹಾಗೂ ಜಲಶಕ್ತಿ ವೆಬ್ಸೈಟ್ನಲ್ಲಿ ಜಿಲ್ಲೆಯ ಪ್ರಗತಿಯನ್ನು ನಿಯಮತಿವಾಗಿ ಅಪ್ಲೋಡ್ ಮಾಡಲು ಕ್ರಮ ಕೈಗೊಳ್ಳಬೇಕೆಂದರು.
Related Articles
Advertisement
ಡಿ.ಡಿ.ಪಿ.ಐ ಪರಮೇಶ್ವರಪ್ಪ, ನಮ್ಮ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 505 ಶಾಲೆಗಳಲ್ಲಿ ಕಳೆದ ಏಳೆಂಟು ವರ್ಷಗಳ ಹಿಂದೆ ಮಳೆಕೊಯ್ಲು ಅಳವಡಿಸಲಾಗಿತ್ತು. ಆದರೆ ಈಗ ಇವ್ಯಾವು ಕೆಲಸ ಮಾಡುತ್ತಿಲ್ಲವೆಂದಾಗ, ಜಿಲ್ಲಾಧಿಕಾರಿಗಳು ಜಲಶಕ್ತಿ ಯೋಜನೆಯಡಿ ಅವುಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.
ಕೇಂದ್ರ ಸರ್ಕಾರದ ಜಲಶಕ್ತಿ ಯೋಜನೆಯ ದಾವಣಗೆರೆ ಜಿಲ್ಲಾ ನೋಡಲ್ ಅಧಿಕಾರಿ ವಿಶಾಲ್ ಪ್ರತಾಪ್ ಸಿಂಗ್ ಮಾತನಾಡಿ, ಈ ಅಭಿಯಾನದಡಿ 2-3 ತಿಂಗಳ ಒಳಗೆ ಕ್ರಿಯಾಯೋಜನೆ ತಯಾರಿಸಬೇಕು. ಐದು ಕಾರ್ಯಕ್ರಮಗಳ ಆಧಾರದಲ್ಲಿ ಜಲಸಂರಕ್ಷಣೆ ಕುರಿತ ಯೋಜನೆಯನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗುವುದು.
ಚನ್ನಗಿರಿ, ಜಗಳೂರು ಮತ್ತು ದಾವಣಗೆರೆ ತಾಲ್ಲೂಕುಗಳಲ್ಲಿ ಕ್ಷೇತ್ರ ಭೇಟಿ ನೀಡಿ ಐದು ಜಲಸಂರಕ್ಷಣಾ ವಿಭಾಗಗಳಲ್ಲಿ ಈಗಾಗಲೇ ಆಗಿರುವ ಕಾರ್ಯಕ್ರಮಗಳು, ಪ್ರಗತಿ ಬಗ್ಗೆ ಹಾಗೂ ಮುಂದೆ ಯಾವ ವಿಭಾಗದ ಮೇಲೆ ಹೆಚ್ಚಿನ ಒತ್ತು ನೀಡಬೇಕೆಂಬುದನ್ನ ಅಧ್ಯಯನ ನಡೆಸಲಾಗುತ್ತಿದೆ. ಈ ಅಭಿಯಾನದಡಿ ಪ್ರತಿ ಜಿಲ್ಲೆಗೆ ಒಬ್ಬ ಸೆಂಟ್ರಲ್ ನೋಡಲ್ ಅಧಿಕಾರಿ, ಬ್ಲಾಕ್ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೇರಿದಂತೆೆ ಜಿಲ್ಲಾಧಿಕಾರಿಗಳಿಗೆ ಒಂದೊಂದು ವಿಭಾಗದ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಜಲಶಕ್ತಿ ಅಭಿಯಾನ ವೆಬ್ಸೈಟ್ನಲ್ಲಿ ಜಲಸಂರಕ್ಷಣೆ ಕುರಿತಾದ ಐದೂ ವಿಭಾಗಗಳಲ್ಲಿ ನಡೆಸಲಾಗುವ ಕಾರ್ಯ ಚಟುವಟಿಕೆಗಳ ಕುರಿತು ಕೆಲಸ ಆಗುವ ಮುನ್ನ ಮತ್ತು ನಂತರದ ಫೋೕಟೊಗಳನ್ನು ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.
ಜಿಪಂ ಸಿಇಓ ಎಚ್.ಬಸವರಾಜೇಂದ್ರ ಮಾತನಾಡಿ, ಈಗಾಗಲೇ ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಜಲಮೂಲಗಳು, ಜಲಸಂರಕ್ಷಣೆ ಕುರಿತು ಶ್ರಮದಾನ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಉಪವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಪಂ ಉಪಕಾರ್ಯದರ್ಶಿ ಭೀಮಾ ನಾಯ್ಕ, ಡಾ|ಡೇವಿತ್ ರಾಜ್, ಡಿಎಚ್ಓ ಡಾ| ರಾಘವೇಂದ್ರಸ್ವಾಮಿ, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನಾರ್, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ದೂಡಾ ಆಯುಕ್ತ ಆದಪ್ಪ,ಇತರರು ಸಭೆಯಲ್ಲಿದ್ದರು.