Advertisement

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

04:18 PM Oct 03, 2024 | Team Udayavani |

ದಾವಣಗೆರೆ: ತಾಲೂಕಿನ ಮಳಲ್ಕೆರೆಯಲ್ಲಿ ಗುರುವಾರ ವಿದ್ಯುತ್ ಪರಿವರ್ತಕ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟಿದ್ದಾರೆ.

Advertisement

ಮುತ್ತಪ್ಪ ಕರಮುಡಿ ಮೃತಪಟ್ಟ ದುರ್ದೈವಿಯಾಗಿದ್ದು.

ಮಳಲ್ಕೆರೆಯ ಗ್ರಾಮ ಪಂಚಾಯತಿ ಕಚೇರಿ ಎದುರು ಇರುವ ವಿದ್ಯುತ್ ಪರಿವರ್ತಕದ ದುರಸ್ತಿ ಮಾಡುತ್ತಿದ್ದರು. ಏಕಾಏಕಿ ವಿದ್ಯುತ್ ಶಾಕ್ ನಿಂದ ಕಂಬದ ಮೇಲೆಯೇ ಸಾವನ್ನಪ್ಪಿದ್ದಾರೆ.

ಗದಗ ಮೂಲದ ಅವರು ಕಳೆದ ಹತ್ತು ವರ್ಷಗಳಿಂದ ಲೈನ್ ಮ್ಯಾನ್ (ಪವರ್ ಮ್ಯಾನ್) ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

Advertisement
Advertisement

Udayavani is now on Telegram. Click here to join our channel and stay updated with the latest news.

Next