Advertisement

Davanagere; ಲಂಚ ಸ್ವೀಕರಿಸುತ್ತಿದ್ದ ಪಿಡಿಒ – ಡಾಟಾ ಎಂಟ್ರಿ ಅಧಿಕಾರಿ ಲೋಕಾಯುಕ್ತ ಬಲೆಗೆ

06:42 PM Oct 27, 2023 | Team Udayavani |

ದಾವಣಗೆರೆ: ಮನೆಯ ಖಾತೆ ಇ-ಸ್ವತ್ತು ಮಾಡಿಕೊಡಲು 10 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಡಾಟಾ ಎಂಟ್ರಿ ಆಪರೇಟರ್ ಇಬ್ಬರನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

Advertisement

ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಸ್.ಎಂ. ನಂದಿಲಿಂಗೇಶ ಸಾರಂಗ ಮಠ (35) ಮತ್ತು ಡಾಟಾಎಂಟ್ರಿ ಆಪರೇಟರ್ ಅಜ್ಜಯ್ಯ (32) ಲೋಕಾಯುಕ್ತರ ಬಲೆಗೆ ಬಿದ್ದವರು.

ದಾವಣಗೆರೆ ನಿಟುವಳ್ಳಿಯಲ್ಲಿ ವಾಸವಿರುವ ಮೂಲತಃ ಜಗಳೂರು ತಾಲೂಕು ಕೆಳಗೋಟೆ ಗ್ರಾಮದ ಬಸವನಗೌಡ ಎಂಬುವರು ಕೆಳಗೋಟೆ ಗ್ರಾಮದಲ್ಲಿನ ತಮ್ಮ ಮನೆಯ ಖಾತೆಗೆ ಇ-ಸ್ವತ್ತು ಮಾಡಿಸಲು ಕೆಚ್ಚೇನಹಳ್ಳಿ ಗ್ರಾಮ ಪಂಚಾಯತ್‌ ಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಲು ಪಿಡಿಒ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಅ.27ರಂದು ಹಣ ನೀಡುವುದಾಗಿ ಹೇಳಿದ್ದ ಬಸವನಗೌಡ ಹೇಳಿದ್ದರು.

ಈತನ್ಮಧ್ಯೆ ಅ.21ರಂದು ಬಸವನ ಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಯೋಜನೆ ರೂಪಿಸಿದ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ನೇತೃತ್ವದ ಅಧಿಕಾರಿಗಳ ಶುಕ್ರವಾರ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಬಸವನಗೌಡ ಅವರಿಂದ 10 ಸಾವಿರ ರೂಪಾಯಿ ಪಡೆಯುತ್ತಿದ್ದ ಎಸ್.ಎಂ. ನಂದಿಲಿಂಗೇಶ ಸಾರಂಗಮಠ ಮತ್ತು ಅಜ್ಜಯ್ಯನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next