Advertisement

ದಾವಣಗೆರೆ ಮಹಾನಗರಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ಪಡೆಯಲು ವಿಫಲವಾದ ಕಾಂಗ್ರೆಸ್, ಬಿಜೆಪಿ

09:56 AM Nov 15, 2019 | Mithun PG |

ದಾವಣಗೆರೆ: ಮಹಾನಗರಪಾಲಿಕೆ 45 ವಾರ್ಡ್ ಗಳಿಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭ್ಯವಾಗಿಲ್ಲ. ಅಧಿಕಾರ ಚುಕ್ಕಾಣಿ ಹಿಡಿಯಲು ಮ್ಯಾಜಿಕ್ ನಂಬರ್  23. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ 22, ಜಿಜೆಪಿ 17, ಬಂಡಾಯ ಅಭ್ಯರ್ಥಿಗಳು 5, ಜೆಡಿಎಸ್ 1 ಸ್ಥಾನದಲ್ಲಿ ಜಯ ಗಳಿಸಿದ್ದಾರೆ.

Advertisement

17 ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಬಿ.ಜಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಸತತ ಮೂರು ಬಾರಿ ಗೆಲುವು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೆಟ್ಟಿ ಈ ಬಾರಿ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇವರು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಆಪ್ತರಾಗಿದ್ದರು.

ದಾವಣಗೆರೆ-ವಾರ್ಡ್ ನಂ 19 ರಲ್ಲಿ ಪಕ್ಷೇತರ ಅಭ್ಯರ್ಥಿ ಶಿವಪ್ರಕಾಶ್ ಜಯಸಾಧಸಿದ್ದಾರೆ.

ವಾರ್ಡ್ ನಂ. 16 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ನಾಗರಾಜ್ ಗೆಲುವು ಪಡೆದರೆ ಬಿಜೆಪಿಯ ಎಚ್.ದಿವಾಕರ್ ಗೆ ಸೋಲುಂಟಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next