Advertisement

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

01:07 PM May 02, 2024 | Team Udayavani |

ದಾವಣಗೆರೆ: ಕರ್ನಾಟಕ ಮತ್ತು ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೋದಿ ಅವರ ನಾಯಕತ್ವಕ್ಕೆ ಜನಮನ್ನಣೆ ಸಿಕ್ಕಿದೆ. ಖಂಡಿತವಾಗಿ 28 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ. ಆ ರೀತಿ ವಾತಾವರಣ ಹಾಗೂ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಲೋಕಸಭಾ ‌ಕ್ಷೇತ್ರದಲ್ಲಿ ಭಾರತೀಯ ‌ಜನತಾ‌ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ದೊಡ್ಡ ಅಂತರದಲ್ಲಿ ಗೆಲುವು ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜ್ವಲ್ ರೇವಣ್ಣ ವಿಚಾರ ಕುರಿತು‌ ಮಾತನಾಡಿದ ಅವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಖಂಡಿತ ಶಿಕ್ಷೆಯಾಗಲಿದೆ. ಈಗಾಗಲೇ ಎಸ್ಐಟಿ ರಚನೆಯಾಗಿದೆ. ನಾವು ಯಾರಿಗೂ ಬೆಂಬಲ‌ ನೀಡುವುದಿಲ್ಲ, ಮಹಿಳೆಯರ ಪರ ನಿಲ್ಲುವವರು ನಾವು ಹಾಗೂ ಯಾರನ್ನೂ ರಕ್ಷಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next