Advertisement

ದಾವಣಗೆರೆ: ವೃದ್ಧ ದಂಪತಿ ಬರ್ಬರ ಕೊಲೆ

10:33 AM Jan 25, 2022 | Team Udayavani |

ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ವೃದ್ದ ದಂಪತಿ ಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Advertisement

ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ದಂಪತಿ. ಸೋಮವಾರ ತಡರಾತ್ರಿ ಕೊಲೆ ನಡೆದಿದೆ ಎನ್ನಲಾಗಿದೆ.

ತಡರಾತ್ರಿ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದು, ಮೂವರಿಗೂ ಮದುವೆಯಾಗಿದೆ.

ಮನೆಯಲ್ಲಿ ಪತಿ ‌ಪತ್ನಿ ಇಬ್ಬರೇ ವಾಸವಾಗಿದ್ದರು. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪಕ್ಕದ ಮನೆಯವರು ಮಂಗಳವಾರ ಬೆಳಗ್ಗೆ ಸರೋಜಮ್ಮ ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next