Advertisement

Davanagere: ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ಒಂದು ವರ್ಷದ ಮಗು ಸಾವು

01:13 PM Jul 25, 2023 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಒಂದು ವರ್ಷದ ಹೆಣ್ಣುಮಗು ಬಲಿಯಾಗಿದೆ. ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಗೋಡೆ ಕುಸಿದು‌ ಒಂದು ವರ್ಷದ ಮಗು ಸಾವನ್ನಪ್ಪಿದೆ

Advertisement

ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ಕೆಂಚಪ್ಪ ಎಂಬುವರ ಮನೆಯ ಗೋಡೆ ಬಿದ್ದ ಪರಿಣಾಮ ಸ್ಫೂರ್ತಿ (1) ಎಂಬ ಮಗು ಸಾವನ್ನಪ್ಪಿದೆ. ಮಂಗಳವಾರ ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮಗುವಿನ ತಂದೆ ಕೆಂಚಪ್ಪ (32) ಗೋಡೆ ಕುಸಿತದಿಂದ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪರಿಶೀಲನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್

ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಮೂರು‌ ದಿನಗಳಿಂದ ಸುರಿದ ನಿರಂತರ ಮಳೆಯಿಂದಾಗಿ ಕೆಂಚಪ್ಪ‌ ಅವರ ಮನೆ ಸಂಪೂರ್ಣವಾಗಿ ಹಾಳಾಗಿದೆ.

ಕಳೆದ ರಾತ್ರಿ ಕೆಂಚಪ್ಪ ಮಗು ಸ್ಪೂರ್ತಿ ಹಾಗೂ‌ ಪತ್ನಿ ಲಕ್ಷ್ಮಿ ಮಲಗಿದ್ದ ವೇಳೆ ಗೋಡೆ ಕುಸಿದು ಬಿದ್ದು ಮಗು ಸಾವನ್ನಪ್ಪಿದೆ.

Advertisement

ಮಲೇಬೆನ್ನೂರು‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next