Advertisement

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

07:25 PM Apr 26, 2024 | Team Udayavani |

ದಾವಣಗೆರೆ: ದಾವಣಗೆರೆಯಲ್ಲಿ ಏ. 28 ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ರ್‍ಯಾಲಿ ಮತ್ತು ಬಹಿರಂಗ ಸಭೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಶುಕ್ರವಾರ ಕಾಂಗ್ರೆಸ್ ಮುಖಂಡರಿಂದ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement

ಒಂದೊಮ್ಮೆ ಪ್ರಧಾನಿಯವರ ರ್‍ಯಾಲಿ ಮತ್ತು ಬಹಿರಂಗ ಸಭೆಗೆ ಅನುಮತಿ ನೀಡಿದಲ್ಲಿ ಗೋಬ್ಯಾಕ್ ಪಿಎಂ ಎಂಬ ಘೋಷಣೆ ಜೊತೆಗೆ ಕಪ್ಪುಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆಯನ್ನೂ ಕಾಂಗ್ರೆಸ್ ಮುಖಂಡರು ನೀಡಿದ್ದಾರೆ.

ಪ್ರಧಾನಿಯವರು ಬಹಿರಂಗ ಸಭೆಗಳಲ್ಲಿ ಕೋಮು ಭಾವನೆ ಕೆರಳಿಸುವ, ದ್ವೇಷದ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅವರ ಸಭೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next