Advertisement

ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

08:00 AM Feb 13, 2019 | Team Udayavani |

ದಾವಣಗೆರೆ: ವಕೀಲರ ಕಲ್ಯಾಣ ನಿಧಿಗೆ ಬಜೆಟ್‌ನಲ್ಲಿ ಹಣ ಮೀಸಲು, ವಕೀಲರ ಸುರಕ್ಷತಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ರಾಷ್ಟ್ರ ವ್ಯಾಪ್ತಿ ಪ್ರತಿಭಟನೆ ಕರೆ ಬೆಂಬಲಿಸಿ, ವಕೀಲರು ಕಲಾಪದಿಂದ ಹೊರ ಉಳಿದು ಪ್ರತಿಭಟಿಸಿದ್ದಾರೆ.

Advertisement

ಈ ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ವಕೀಲರ ಕಲ್ಯಾಣ ನಿಧಿಗೆ ಹಣ ಮೀಸಲಿಡ ಬಗ್ಗೆ ವಕೀಲರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆಯಲ್ಲದೆ, ಕಲ್ಯಾಣ ನಿಧಿಗೆ 5,000 ಕೋಟಿ ಅನುದಾನ ಮೀಸಲಿಡಲು ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟಿಸಿದರು.

ವಕೀಲರ ಸಂಘಕ್ಕೆ ಕಟ್ಟಡ, ಮೂಲಭೂತ ಸೌಕರ್ಯ, ಮಹಿಳಾ ವಕೀಲರಿಗೆ ಶೌಚಾಲಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಲಾಗಿದೆ. ವಕೀಲರು ಮತ್ತವರ ಕುಟುಂಬದವರಿಗೆ ವಿಮಾ ಸೌಲಭ್ಯ, ಹೊಸದಾಗಿ ವೃತ್ತಿ ಆರಂಭಿಸುವವರಿಗೆ 5 ವರ್ಷದವರೆಗೆ ಕನಿಷ್ಠ 10 ಸಾವಿರ ರೂ. ಸ್ಟೈಪಂಡ್‌, ವಕೀಲರು ಕಾಯಿಲೆಯಿಂದ ಮರಣ ಹೊಂದಿದಲ್ಲಿ ಅವರ ಕುಟುಂಬದವರಿಗೆ ಆರ್ಥಿಕ ನೆರವು, ಕಡಿಮೆ ದರದಲ್ಲಿ ವಸತಿ ಒದಗಿಸುವುದು, ವಕೀಲರ ಸುರಕ್ಷತೆಗಾಗಿ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎನ್‌.ಟಿ. ಮಂಜುನಾಥ್‌, ಕಾರ್ಯದರ್ಶಿ ಬಿ.ಎಸ್‌. ಲಿಂಗರಾಜ್‌, ಎಲ್‌.ಶ್ಯಾಮ್‌ ಇತರರು ಮನವಿ ಸಲ್ಲಿಸಿದ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next