Advertisement

Davanagere: ಕರಸೇವಕರ ಬಂಧನ ವಿರೋಧಿಸಿ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ

12:30 PM Jan 08, 2024 | Team Udayavani |

ದಾವಣಗೆರೆ: ರಾಜ್ಯ ಸರ್ಕಾರ ಕರಸೇವಕರ ಬಂಧಿಸುವ ಮೂಲಕ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೋಮವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಬಡಾವಣೆ ಪೊಲೀಸ್ ಠಾಣೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಹಿನ್ನೆಲೆಯಲ್ಲಿ ಪಿ.ಜೆ. ಬಡಾವಣೆಯ ಶ್ರೀ ರಾಮ ಮಂದಿರದಿಂದ ಮೆರವಣಿಗೆ ನಡೆಸಿದರು.

ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸಿದೆ. ಶ್ರೀಕಾಂತ್ ಪೂಜಾರಿ ಅವರಂತೆ ನಾವೂ ಕರಸೇವಕರು, ಸರ್ಕಾರಕ್ಕೆ ತಾಕತ್ತಿದ್ದರೆ ಎಲ್ಲ ಕರಸೇವಕರ ಬಂಧಿಸಬೇಕು ಎಂದು ಒತ್ತಾಯಿಸಿದರು.

ಡಾ. ಟಿ.ಜಿ. ರವಿಕುಮಾರ್, ಲೋಕಿಕೆರೆ ನಾಗರಾಜ್, ಮಾಜಿ ಮೇಯರ್ ಅಜಯ್ ಕುಮಾರ್ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next