Advertisement

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

02:00 PM Apr 29, 2024 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಬಗ್ಗೆ ಯಾರೂ ಹೇಳಿಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಧಿಕಾರ ಇರುವವರೆಗೂ ಅವರೇ ಮುಂದುವರಿಯಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಮುಗಿದ ನಂತರ ಗ್ಯಾರಂಟಿ ಯೋಜನೆ ಇರುವುದಿಲ್ಲ ಎಂದು ಹೇಳುತ್ತಾರೆ. ನಾವು ಅಂದರೆ ಕಾಂಗ್ರೆಸ್ ಇರುವವರೆಗೆ ಗ್ಯಾರಂಟಿ ಇರುತ್ತವೆ. ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಪಾಕಿಸ್ತಾನ, ಶ್ರೀಲಂಕಾ ಮಾದರಿ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದರು. ಗ್ಯಾರಂಟಿ ಯೋಜನೆ ನಿಲ್ಲುವುದೇ ಇಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞರು. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿಗೆ ಯಾವುದೇ ಕೊರತೆ ಆಗದಂತೆ ಅನುದಾನ ನೀಡಲಾಗಿದೆ. ಮೊದಲೇ ಯೋಚಿಸಿಯೇ ಗ್ಯಾರಂಟಿ ಯೋಜನೆ ಜಾರಿಗೆ ತಂದ ದೂರದೃಷ್ಟಿತ್ವದ ನಾಯಕ. ಅವರ ಜನಪಯೋಗಿ ಕಾರ್ಯಕ್ರಮಗಳನ್ನು ಇತರೆ ರಾಜ್ಯದವರು ನಕಲು ಮಾಡುತ್ತಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next