Advertisement

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

12:59 PM Sep 26, 2024 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ನಾಯಕರು, ಅಭಿಮಾನಿಗಳು ಕಪ್ಪುಪಟ್ಟಿ ಧರಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೌನ ಪ್ರತಿಭಟನೆ ನಡೆಸಿದರು.

Advertisement

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ನ್ಯಾಯಾಲಯ ಒಳ್ಳೆಯ ತೀರ್ಪು ನೀಡುವ ವಿಶ್ವಾಸ ಇತ್ತು. ಪ್ರಾಮಾಣಿಕವಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಎರಡನೇ ಬಾರಿಗೆ ಒಳ್ಳೆಯ ಅಧಿಕಾರ ನೀಡುತ್ತಿದ್ದಾರೆ. ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ಯಾವ ಕಾರಣಕ ರಾಜೀನಾಮೆ ನೀಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ. ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಅವರ ಪರ ಇಡೀ ರಾಜ್ಯದ ಜನರಿದ್ದಾರೆ. 136 ಶಾಸಕರಿದ್ದಾರೆ.‌ ಕಾಂಗ್ರೆಸ್ ಅವರಿಗೆ ದಿನಕ್ಕೊಂದು ನೋಟಿಸ್ ನೀಡುವ ರಾಜ್ಯಪಾಲರು ಬಿಜೆಪಿಯವರಿಗೆ ಏನೂ ಕೇಳುವುದಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ನಗರಪಾಲಿಕೆ ಸದಸ್ಯ ಎ. ನಾಗರಾಜ್, ಕೆ.ಜಿ. ಶಿವಕುಮಾರ್, ಬಿ. ವೀರಣ್ಣ, ಎಲ್.ಡಿ. ಗೋಣೆಪ್ಪ, ಸಯೀದ್ ಚಾರ್ಲಿ, ಎಸ್. ವೆಂಕಟೇಶ್, ಕವಿತಾ ಚಂದ್ರಶೇಖರ್, ಬಿ.ಎಚ್. ಪರಶುರಾಮಪ್ಪ, ಎಸ್. ಮಲ್ಲಿಕಾರ್ಜುನ್, ಎಸ್‌. ಎಲ್. ಆನಂದಪ್ಪ, ಸುರೇಶ್ ಕೋಗುಂಡೆ, ಕಾವ್ಯ, ಕೆ.ಎನ್. ಮಂಜುನಾಥ್, ಮಂಜುನಾಥ್, ಎಸ್. ಎಸ್.‌ ಗಿರೀಶ್, ಇಟ್ಟಿಗುಡಿ ಮಂಜುನಾಥ್, ನಂಜಾನಾಯ್ಕ, ಎಚ್. ಜಯಣ್ಣ, ಆದಿಲ್ ಖಾನ್, ರವೀಂದ್ರ, ಜಯಶ್ರೀ, ಡಿ. ಶಿವಕುಮಾರ್, ಆರ್. ಪ್ರತಾಪ್, ಜಿ.ಸಿ. ನಿಂಗಪ್ಪ,  ರೇವಣಸಿದ್ದಪ್ಪ, ಲಿಯಾಖತ್ ಅಲಿ ಇತರರು, ಮುದೇಗೌಡ್ರ ಗಿರೀಶ್, ಮಂಜಮ್ಮ, ಮಂಜುಳಮ್ಮ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next