Advertisement

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

10:14 PM Sep 19, 2024 | Team Udayavani |

ದಾವಣಗೆರೆ:ನಗರದ ಬೇತೂರು ರಸ್ತೆಯ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.

Advertisement

ಗುರುವಾರ ಸಂಜೆ ಬೇತೂರು ರಸ್ತೆಯಲ್ಲಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಏಕಾಏಕಿ ಕಲ್ಲುಗಳ ತೂರಾಟ ನಡೆದಿದ್ದು ಇಬ್ಬರು ಪೊಲೀಸ್‌ ಸಿಬ್ಬಂದಿ ಸೇರಿದಂತೆ 5ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕೂಡಲೇ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ವೆಂಕಾಭೋವಿ ಕಾಲೋನಿಯ ಗಣೇಶನ ಮೆರವಣಿಗೆ ಪ್ರತಿ ವರ್ಷದ ಮಾರ್ಗದಲ್ಲೇ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ತಾವು ಒಳಗೊಂಡಂತೆ ಎಲ್ಲ ಅಧಿಕಾರಿಗಳು ರೌಂಡ್ಸ್ ಮಾಡುತ್ತಿದ್ದೇವೆ.‌ ಪರಿಸ್ಥಿತಿ ಶಾಂತ ವಾಗಿದೆ. ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ಕಳಿಸಿಕೊಡಲಾಗಿದೆ ಎಂದು ತಿಳಿಸಿದರು.

Advertisement

ಬುಧವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

144 ಸೆಕ್ಷನ್ ಜಾರಿ ಸಂಬಂಧಿಸಿದಂತೆ ಜಿಲ್ಲಾ ಧಿಕಾರಿಗಳ ಜೊತೆ ಮಾತನಾಡಲಾಗಿದೆ. ಬೇತೂರು ರಸ್ತೆಯಲ್ಲಿನ ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ವಶಕ್ಕೆ ತೆಗೆದು ಕೊಂಡಿಲ್ಲ. ಎಲ್ಲವನ್ನೂ ಪರಿಶೀಲನೆ ನಡೆಸಿದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next