Advertisement

Davanagere: ಎತ್ತುಗಳ ಮೈತೊಳೆಯಲು ಹೋಗಿದ್ದ ಮೂವರು ನೀರುಪಾಲು

09:44 PM Apr 23, 2023 | Team Udayavani |

ದಾವಣಗೆರೆ:ತುಂಗಭದ್ರಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ಭಾನುವಾರ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

Advertisement

ಗ್ರಾಮದ ವೀರಪ್ಪ ಎಂಬುವರ ಪುತ್ರ ಪವನ್ ಹಾಗೂ ಬಸವರಾಜಪ್ಪನವರ ಮಕ್ಕಳಾದ ಕಿರಣ್, ವರುಣ್ ನೀರು ಪಾಲಾದವರು.

ಮುಂಜಾನೆ ಹೊಲದಲ್ಲಿ ಬೇಸಾಯ ಮುಗಿಸಿದ ನಂತರ ತುಂಗಭದ್ರಾ ನದಿಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಎತ್ತುಗಳು ಓರ್ವನನ್ನು ನೀರಿನಲ್ಲಿ ಎಳೆದುಕೊಂಡು ಹೋಗಿದ್ದು, ಆತನನ್ನು ಉಳಿಸಲು ಹೋದ ಇನ್ನಿಬ್ಬರು ಸಹ ನೀರು ಪಾಲಾಗಿದ್ದಾರೆ. ವಯಸ್ಸಿಗೆ ಬಂದ ಮಕ್ಕಳು ನೀರು ಪಾಲಾಗಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತುಂಗಭದ್ರಾ ನದಿಯಲ್ಲಿ ಮುಳುಗಿ ನೀರು ಪಾಲಾದ ಮೂವರು ಯುವಕರಲ್ಲಿ ವರುಣ್ ಎಂಬುವವನ ಮೃತ ದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗೆ ಹುಡುಕಾಟ ನಡೆಸುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ ರೇಣುಕಾಚಾರ್ಯ, ಕೂಡಲೇ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದರು, ನಂತರ ಘಟನಾ ಸ್ಥಳಕ್ಕೆ ತೆರಳಿದ ಶಾಸಕರು ಹರಿಹರದಿಂದ ಮುಳುಗು ತಜ್ಞರನ್ನು ಕರೆಸುವಂತೆ ಸಂಬಂಧ ಪಟ್ಟವರಿಗೆ ಸೂಚನೆ ನೀಡಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ದುಖಃ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next