Advertisement

Davangere ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜತೆಗೂಡಿ ಪತಿಯ ಕೊಲೆಗೈದ ಪತ್ನಿ

08:18 AM Jun 14, 2023 | Team Udayavani |

ದಾವಣಗೆರೆ: ಅನೈತಿಕ ಸಂಬಂಧಕ್ಕೆ ಅಡ್ಡಿ ಆಗುತ್ತಿದ್ದಾನೆ ಎಂದು ಪ್ರಿಯಕರನೊಡಗೂಡಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.

Advertisement

ದಾವಣಗೆರೆ ತಾಲೂಕಿನ ದುರ್ಗಾಂಬಿಕಾ ಕ್ಯಾಂಪ್ ನಿವಾಸಿ ಕಾವ್ಯ ಮತ್ತು ಆಕೆಯ ಪ್ರಿಯಕರ ದಾವಣಗೆರೆಯ ವಿನೋಬ ನಗರದ ನಾಲ್ಕನೇ ಮುಖ್ಯ ರಸ್ತೆ ಏಳನೇ ಕ್ರಾಸ್ ನಿವಾಸಿ ಬೀರೇಶ್ (24) ಬಂಧಿತರು.

ಜೂ. 9 ರಂದು ಹಳೆ ಬಿಸಲೇರಿ ಗ್ರಾಮದಲ್ಲಿ ಲಿಂಗರಾಜ್ ಎಂಬಾತ ಗೋಡೆ ಮೇಲಿನಿಂದ ಬಿದ್ದು ಸಾವನ್ನಪ್ಪಿದ್ದು, ಅವನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಲಿಂಗರಾಜ್ ನನ್ನು ಕೊಲೆ ಮಾಡಲಾಗಿದೆ ಎಂದು ದೂರು ಸಲ್ಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೀರೇಶ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅವನು ನೀಡಿದ ಸುಳಿವಿನ ಆಧಾರದಲ್ಲಿ ಕೊಲೆಗೀಡಾದ ಲಿಂಗರಾಜ್ ಪತ್ನಿ ಕಾವ್ಯಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಕಾವ್ಯ ಮತ್ತು ಬೀರೇಶ್ ಅನೈತಿಕ ಸಂಬಂಧ ಹೊಂದಿದ್ದರು. ಕೆಲ ದಿನಗಳ ಹಿಂದೆ ಇಬ್ಬರೂ ಮಂಗಳೂರಿಗೆ ಹೋಗಿದ್ದರು. ನಂತರ ಕಾವ್ಯ ಪತಿಯೊಡನೆ ಜೀವನ ನಡೆಸುತ್ತಿದ್ದಳು. ಆ ನಡುವೆಯೂ ಬೀರೇಶ್ ಜೊತೆಗೆ ಸಂಬಂಧ ಮುಂದುವರೆಸಿದ್ದಳು.

Advertisement

ತಮ್ಮ ಸಂಬಂಧಕ್ಕೆ ಗಂಡನೇ ಅಡ್ಡಿ ಆಗುತ್ತಿದ್ದಾನೆ ಎಂದು ಪ್ರಿಯಕರ ಜೊತೆಗೂಡಿ ಕೊಲೆ ಮಾಡಿದ್ದಳು. ಗೋಡೆ ಮೇಲಿನಿಂದ ಬಿದ್ದು ಸಾವನ್ನಪ್ಪಿದಾನೆ ಎಂಬ ನಾಟಕವಾಡಿದ್ದಳು.

Advertisement

Udayavani is now on Telegram. Click here to join our channel and stay updated with the latest news.

Next