Advertisement

Davanagere ; ಗಣಪತಿ ಶೋಭಾಯಾತ್ರೆ ಸಿದ್ದತೆ ವೇಳೆ ಯುವಕ ಮೃತ್ಯು

09:06 PM Oct 11, 2023 | Team Udayavani |

ದಾವಣಗೆರೆ: ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಿದ್ದತೆ ವೇಳೆ ಸಂಭವಿಸಿದ ಅವಘಡದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ದಾವಣಗೆರೆಯಬಸವರಾಜಪೇಟೆ ನಿವಾಸಿ ಪೃಥ್ವಿರಾಜ್ (26) ಮೃತ ದುರ್ದೈವಿ. ಶನಿವಾರ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಿಬಿ ರಸ್ತೆಯಲ್ಲಿ ಕೇಸರಿ ಧ್ವಜಗಳನ್ನು ಕಟ್ಟುವಾಗ ಕ್ರೇನ್ ಹರಿದ ಪರಿಣಾಮ ಪೃಥ್ವಿರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಿಬಿ ರಸ್ತೆಯ ರೇಣುಕಾಮಂದಿರದ ಬಳಿ ಶೋಭಾಯಾತ್ರೆಗೆ ಬಂಟಿಂಗ್ಸ್ ಕಟ್ಟಲಾಗು ತ್ತಿತ್ತು. ಈ ಸಂದರ್ಭದಲ್ಲಿ ಪೃಥ್ವಿರಾಜ್
ಕ್ರೇನ್ ಹಿಂದೆ ನಿಂತಿದ್ದ ಗಮನಿಸದೆ ಚಾಲಕ ಹಿಂದಕ್ಕೆ ಬಿಟ್ಟಿರುವುದರಿಂದ ತಲೆ ಮೇಲೆ ಕ್ರೇನ್ ಹರಿದ ಹಿನ್ನಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ

. ಜಿಲ್ಲಾಸ್ಪತ್ರೆಯ ಮುಂಭಾಗ ಮೃತನ ಕುಟುಂಬಸ್ಥರ ಅಕ್ರಂದನ ಮುಗಿಲು‌ ಮುಟ್ಟಿತ್ತು.ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನ ಸಾವಿನ ಹಿನ್ನೆಲೆ ಗುರುವಾರ ನಡೆಯಬೇಕಿದ್ದ ಹಿಂದು ಮಹಾ ಗಣಪತಿ ಬೈಕ್ ರ‍್ಯಾಲಿ ರದ್ದುಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next