Advertisement

ಕಂಚಿಕೆರೆ-ಅರಸೀಕರೆ ರಸ್ತೆ ದುರಸ್ತಿಗೆ ಮನವಿ

05:37 PM Feb 09, 2020 | Naveen |

ದಾವಣಗೆರೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಶ್ರೀಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಪಾದಯಾತ್ರೆ ಮೂಲಕ ಸಾವಿರಾರು ಭಕ್ತರು ತೆರಳುತ್ತಿದ್ದು, ಅವರು ಬರಿಗಾಲದಲ್ಲಿ ಹೋಗುವ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಇಲಾಖೆಯವರು ತಕ್ಷಣ ಮುಂದಾಗಲಿ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಎಲ್‌. ಹರೀಶ್‌ ಮನವಿ ಮಾಡಿದ್ದಾರೆ.

Advertisement

ರಾಜ್ಯದಲ್ಲಿಯೇ ಅತಿ ಹೆಚ್ಚಿನ ಭಕ್ತರು ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಾರೆ. ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಪಾದಯಾತ್ರೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಪಾದಯಾತ್ರೆಯಲ್ಲಿ ಹೋಗುತ್ತಾರೆ. ದಾವಣಗೆರೆ, ಹೊನ್ನಳ್ಳಿ, ಚನ್ನಗಿರಿ, ಹರಿಹರ ತಾಲೂಕಿನ ಭಕ್ತರು ಕಂಚಿಕೆರೆ, ಅರಸೀಕೆರೆ ಮುಖಾಂತರ ಕೊಟ್ಟೂರಿಗೆ ಪಾದಯಾತ್ರೆ ಕೈಗೊಳ್ಳುತ್ತಾರೆ. ಹಲವು ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದರೂ ಸಹ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಪ್ರತಿವರ್ಷ ಭಕ್ತರು ಪಾದಯಾತ್ರೆ ಸಂದರ್ಭದಲ್ಲಿ ಸರ್ಕಾರಕ್ಕೆ ಹಿಡಿಶಾಪ ಹಾಕುವುದು ತಪ್ಪಿಲ್ಲ.

ಈ ಬಾರಿಯಾದರೂ ನಮ್ಮ ಜನಪ್ರತಿನಿಧಿಗಳು ಕೆಸರೆರಚಾಟ ಬಿಟ್ಟು ಭಕ್ತರ ಮನವಿಗೆ ಸ್ಪಂದಿಸಿ, ರಸ್ತೆ ಅಭಿವೃದ್ಧಿ ಅಥವಾ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಮಾಡಿಸಲಿ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next