Advertisement

Davangere:ಬಿಜೆಪಿ ಅಭ್ಯರ್ಥಿ ಬದಲಾಗದಿದ್ದರೆ ಅಚ್ಚರಿಯ ಬಂಡಾಯ ಅಭ್ಯರ್ಥಿ

08:15 PM Mar 21, 2024 | Team Udayavani |

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಪಟ್ಟು ಹಿಡಿದಿರುವ ಅಸಮಾಧಾನಿತರ ಗುಂಪು ಬದಲಾವಣೆ ಮಾಡದಿದ್ದಲ್ಲಿ ಅಚ್ಚರಿ ಅಭ್ಯರ್ಥಿಯೊಬ್ಬರನ್ನ ಕಣಕ್ಕಿಳಿಸಲು ಸಹ ನಿರ್ಧರಿಸಿದ್ದಾರೆ.

Advertisement

ಗುರುವಾರ ಸಂಜೆ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರೆಡ್ಡಿ, ಎಸ್.ಎ. ರವೀಂದ್ರನಾಥ್, ದಾವಣಗೆರೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗ ಲೇಬೇಕು. ಬದಲಾಗದಿದ್ದರೆ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನ ನಿಲ್ಲಿಸಿ ಗೆಲ್ಲಿಸುವುದರೊಂದಿಗೆ ಮುಂದೆ ಅವರನ್ನ ನರೇಂದ್ರ ಮೋದಿಗೆ ಅವರಿಗೆ ಒಪ್ಪಿಸುತ್ತೇವೆ ಎಂದರು.

ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನ ಸ್ಪರ್ಧೆಯಿಂದ ಹಿಂದೆ ಸರಿಸಬೇಕು. ಅಭ್ಯರ್ಥಿಯನ್ನ ಬದಲಾವಣೆ ಮಾಡಿರುವಂತಹ ಹತ್ತಾರು ನಿದರ್ಶನಗಳು ಆಗಿವೆ. ನಾಮಪತ್ರ ಕೊನೆಯ ದಿನದ ವರೆಗೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಮುಖಂಡರು ಬದಲಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ನಾವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ, ನಡ್ಡಾ ವಿರುದ್ಧ ಅಥವಾ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next