Advertisement

ದಾವಣಗೆರೆ: ವಿದ್ಯುತ್ ಪ್ರವಹಿಸಿ ಮಾಜಿ ಸೈನಿಕ ನಿಧನ

12:59 PM Feb 20, 2023 | Team Udayavani |

ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್‌ ತಂತಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಮಾಜಿ ಸೈನಿಕರೊಬ್ಬರು ಮೃತಪಟ್ಟಿದ್ದಾರೆ.

Advertisement

ಹೊನ್ನಾಳಿ ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ. ತೋಟಕ್ಕೆ ನೀರು ಬಿಡಲು ಹೋಗಿದ್ದಾಗ ಅವಘಡ ಸಂಭವಿಸಿದೆ.

ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಸ್ವಗ್ರಾಮ ತರಗನಹಳ್ಳಿಯ ರುದ್ರಭೂಮಿಯಲ್ಲಿ ಸೋಮವಾರ ಅಂತ್ಯಸಂಸ್ಕಾರ ನೆರವೇರಿತು. ಎ ಸ್.ಟಿ. ಹನುಮಂತಪ್ಪ ಅವರು ಭಾರತೀಯ ಅರೆಸೇನಾ ಪಡೆಯಾದ ಸಿಆರ್‌ಪಿಎಫ್‌ ನಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next