Advertisement

ಮಾನವೀಯತೆ ಮೆರೆದ ಅಧಿಕಾರಿಗೆ ಸನ್ಮಾನ

11:32 AM Jun 05, 2020 | Naveen |

ದಾವಣಗೆರೆ: ರಸ್ತೆ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಒದ್ದಾಡುತ್ತಿದ್ದ ಪ್ರೇಮಾ (44 ವರ್ಷ) ಎಂಬ ಮಹಿಳೆಯನ್ನು ತಮ್ಮ ವಾಹನದಲ್ಲಿ ಕರೆತಂದು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸವಾಪಟ್ಟಣ ನಾಡ ಕಚೇರಿಯ ಉಪ ತಹಶೀಲ್ದಾರ್‌ ಎನ್‌.ಎಸ್‌. ಚಂದ್ರಪ್ಪ ಅವರನ್ನು ಮಂಗಳವಾರ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಸನ್ಮಾನಿಸಿದರು.

Advertisement

ಮೇ. 30 ರಂದು ತ್ಯಾವಣಿಗಿ ಬೆಸ್ಕಾಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಗಳೂರು ತಾಲೂಕಿನ ಹಳದಂಡೆ ಗ್ರಾಮದ ಪ್ರೇಮಾ ಎಂಬುವರು ದಾವಣಗೆರೆಯಿಂದ ಮೋಟಾರ್‌ ಬೈಕಿನಲ್ಲಿ ಬರುತ್ತಿರುವಾಗ ಮತ್ತಿ ಗ್ರಾಮದ ಸಮೀಪ ಅಡ್ಡ ಬಂದ ಎಮ್ಮೆಗೆ ಬೈಕ್‌ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಪ್ರೇಮಾ ತೀವ್ರ ಗಾಯಗೊಂಡು ಒದ್ದಾಡುತ್ತಿದ್ದರು. ಅದೇ ಮಾರ್ಗವಾಗಿ ತೆರಳುತ್ತಿದ್ದ ಉಪ ತಹಶೀಲ್ದಾರ್‌ ಚಂದ್ರಪ್ಪ ಗಾಯಾಳು ತಮ್ಮ ಕಾರಿನಲ್ಲಿ ದಾವಣಗೆರೆ ಎಸ್‌ಎಸ್‌ ಆಸ್ಪತ್ರೆಗೆ ತಂದು ಸೇರಿಸಿ, ಆಸ್ಪತ್ರೆ ಖರ್ಚಿಗೆಂದು 10 ಸಾವಿರ ನೀಡಿದ್ದರು. ಪ್ರೇಮಾ ತಂದೆ ತಾಯಿಗೆ ವಿಷಯ ತಿಳಿಸಿದ್ದರು.

ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ನಮ್ಮ ಸುತ್ತಮುತ್ತಲು ಏನಾದರೂ ಅವಘಡ ಸಂಭವಿಸಿದರೆ ಸಹಾಯಕ್ಕೆ ಮುಂದಾಗಿ ಮಾನವೀಯತೆ ಮೆರೆಯಬೇಕು ಎಂದರು. ಅಪಘಾತಕ್ಕೀಡಾದ ಪಂಚಾಕ್ಷರಪ್ಪನವರಿಗೆ ಧೈರ್ಯ ಹೇಳಿದರು. ಚಂದ್ರಪ್ಪನವರ ಪತ್ನಿ ಬಿ.ಎಸ್‌.ರೇಣುಕಮ್ಮ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next