Advertisement

ವಿವಿಧ ಕಾಮಗಾರಿಗೆ ಚಾಲನೆ

11:14 AM Jul 04, 2020 | Naveen |

ದಾವಣಗೆರೆ: ದಾವಣಗೆರೆ-ಹರಿಹರ ನಗಾರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶುಕ್ರವಾರ ಬೀರೂರು- ಸಮ್ಮಸಗಿ ರಸ್ತೆಯ ವಿವಿಧ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್‌ ಭೂಮಿಪೂಜೆ ನೆರವೇರಿಸಿದರು.

Advertisement

ದಾವಣಗೆರೆ-ಹರಿಹರ ನಗಾರಾಭಿವೃದ್ಧಿ ಪ್ರಾಧಿಕಾರದ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಬೀರೂರು- ಸಮ್ಮಸಗಿ ರಸ್ತೆಯ ಉಳಿದ ಪ್ರದೇಶದಲ್ಲಿ.49 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಅಲಂಕಾರಿಕ ಕಂಬ ಹಾಗೂ ಜಿಲ್ಲಾಧಿಕಾರಿ ಕಚೇರಿಯಿಂದ ಜಿಎಂಐಟಿವರೆಗೆ 40 ಎಲ್‌.ಇ.ಡಿ ದೀಪಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ಮಾಯಕೊಂಡ ಶಾಸಕ ಪ್ರೊ| ಎನ್‌. ಲಿಂಗಣ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ನಿರ್ದೇಶಕರಾದ ದೇವಿರಮ್ಮ, ಸೌಭಾಗ್ಯ ಮುಕುಂದ, ಡಿ.ಬಿ. ಜಯರುದ್ರಪ್ಪ, ನಾಗರಾಜ್‌, ಕಾರ್ಯಪಾಲಕ ಅಭಿಯಂತರ ಶ್ರೀಕರ್‌, ಸುಜಯ್‌ಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next