Advertisement

ಅನಧಿಕೃತ ಮೆಕ್ಕೆಜೋಳ ಬಿತ್ತನೆ ಬೀಜ ಮಾರಿದಲ್ಲಿ ಕ್ರಿಮಿನಲ್‌ ಮೊಕದ್ದಮೆ

03:33 PM May 25, 2020 | Naveen |

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಕಳಪೆ/ಬಿಡಿ ಬಿತ್ತನೆ ಬೀಜದ ಹಾವಳಿ (ಪ್ರಮಾಣ) ಹೆಚ್ಚಾಗುತ್ತಿದ್ದು, ಅಂತಹ ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿರುವ ಕೃಷಿ ಇಲಾಖೆ, ಅನಧಿಕೃತ ಬಿತ್ತನೆ ಬೀಜ ಖರೀದಿಸದಂತೆ ರೈತರಲ್ಲಿ ಮನವಿ ಮಾಡಿದೆ.

Advertisement

ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಮುಖ್ಯ ಬೆಳೆಗಳಾಗಿದ್ದು, ಮೆಕ್ಕೆಜೋಳ ಬೀಜ ಖರೀದಿಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ, ಮಾರಾಟ ಮಳಿಗೆಗಳಿಗೆ ಆಗಮಿಸುತ್ತಿದ್ದಾರೆ. ಹಲವರು ಬಿಡಿ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ, ರೈತರಿಗೆ ಮಾರಾಟ ಮಾಡುತ್ತಿರುವುದು ಗಮನ ಬಂದಿದೆ. ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿ ತೊಂದರೆ ಮತ್ತು ನಷ್ಟ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ. ಆದ್ದರಿಂದ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರು ಮತ್ತು ರೈತ ಸಂಪರ್ಕ ಕೇಂದ್ರಗಳಿಂದ ಮಾತ್ರ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ.

ಅನಧಿಕೃತ ಲೂಸ್‌ ಮೆಕ್ಕೆಜೋಳ ಬಿತ್ತನೆ ಬೀಜ ಖರೀದಿಸುವವರು, ದಾಸ್ತಾನು ಮಾಡಿ ಮಾರಾಟ ಮಾಡುವವರು ಕಂಡುಬಂದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹಾಗೂ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನ ಸಂಪರ್ಕಿಸಿ, ದೂರು ದಾಖಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್‌ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next