ದಾವಣಗೆರೆ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಮಂಗಳವಾರ (ಫೆ. 7) ತಡರಾತ್ರಿ ತಾಲೂಕಿನ ಆನಗೋಡು ಗ್ರಾಮದ ಬಳಿ ನಡೆದಿದೆ. ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.
Advertisement
ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು.
ಅಪಘಾತದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.