Advertisement

ದಾವಣಗೆರೆ : ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

08:01 PM Jan 20, 2023 | Team Udayavani |

ದಾವಣಗೆರೆ: ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ದಾವಣಗೆರೆ ವಲಯ ಕಚೇರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಶಿರಸ್ತೇದಾರ್ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ವಿಶೇಷ ಭೂ ಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ಜಿ.ಡಿ. ಶೇಖರ್ ಮತ್ತು ಶಿರಸ್ತೇದಾರ್ ವಿ.ಎ. ಶ್ರೀನಿವಾಸ್ ಲೋಕಾಯುಕ್ತರ ಬಲೆಗೆ ಬಿದ್ದವರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲೇ ಹಾವೇರಿ ತಾಲೂಕಿನ ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಎಂಬುವರಿಂದ ೩೦ ಸಾವಿರ ರೂಪಾಯಿ ಲಂಚ ಪಡೆದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.

ಸರ್ಕಾರದ ಯೋಜನೆಗೆಂದು ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಭೂಮಿ ಸ್ವಾಽನಪಡಿಸಿಕೊಳ್ಳ ಲಾಗಿದ್ದು ಪರಿಹಾರಕ್ಕೆ ಇಬ್ಬರು ೩೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಬಗ್ಗೆ ಸಂತೋಷ್ ಗುಡ್ಡಪ್ಪನವರ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ .ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ, ಇನ್ಸ್‌ಪೆಕ್ಟರ್ ಎಚ್.ಎಸ್. ರಾಷ್ಟ್ರಪತಿ, ಎನ್.ಎಚ್. ಆಂಜನೇಯ ಅವರನ್ನೊಳಗೊಂಡ ತಂಡ ದಾಳಿ ನಡೆಸಿ, ಇಬ್ಬರು ಅಧಿಕಾರಿ ಗಳನ್ನ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next