Advertisement

ಪರಿಶಿಷ್ಟರ ಅಭಿವೃದ್ಧಿಗೆ 30 ಸಾವಿರ ಕೋಟಿ

11:20 AM Feb 10, 2020 | Naveen |

ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮಗ್ರ ಅಭಿವೃದ್ಧಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ 2ನೇ ಮಹಿರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಕಳೆದ ಸೆ. 16ಕ್ಕೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಅವರು ಎಸ್ಸಿ, ಎಸ್ಟಿಗೆ 30,445 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಭೂ ಒಡೆತನ ಯೋಜನೆಯಡಿ 647 ಜನರಿಗೆ 874 ಎಕರೆ ಜಮೀನು ಖರೀದಿ, ಗಂಗಾ ಕಲ್ಯಾಣ ಯೋಜನೆಯಡಿ 10 ಸಾವಿರ ಕೊಳವೆಬಾವಿ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ್ಯಾಂತ 12 ಸಾವಿರ ಜನರಿಗೆ ಆರ್ಥಿಕಾಭಿವೃದ್ಧಿಗೆ 300 ಕೋಟಿ ನೀಡಿದ್ದಾರೆ. 929 ಜನರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗಿದೆ. ವಾಹನ ಖರೀದಿ, ಸಮೃದ್ಧಿ ಯೋಜನೆಗೂ ಅನುದಾನ ನೀಡಿದ್ದಾರೆ. ವಾಲ್ಮೀಕಿ ಸಮಾಜದ ಡಾ| ರಂಗರಾಜ ವನದುರ್ಗ, ಹೆಗ್ಗಣ್ಣನವರ್‌ ಅವರನ್ನು ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದು ಯಡಿಯೂರಪ್ಪ ಅವರು ವಾಲ್ಮೀಕಿ ಸಮಾಜದ ಬಗ್ಗೆ ಹೊಂದಿರುವ ಸಾಮಾಜಿಕ ಕಾಳಜಿ, ಕಳಕಳಿಗೆ ಸಾಕ್ಷಿ ಎಂದು ಹರ್ಷ ವ್ಯಕ್ತಪಡಿಸಿದರು.

2008 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದಿಂದಲೇ ವಾಲ್ಮೀಕಿ ಜಯಂತಿ ಆಚರಿಸುವ ಜೊತೆಗೆ ರಜೆ ಘೋಷಣೆಯನ್ನೂ ಮಾಡಿದವರು. ನರೇಂದ್ರ ಮೋದಿ ಅವರ ಸರ್ಕಾರ ಎಸ್ಸಿ, ಎಸ್ಟಿಯ ಮೀಸಲಾತಿ ಸೌಲಭ್ಯವನ್ನು ಇನ್ನೂ 10 ವರ್ಷಕ್ಕೆ ಮುಂದುವರೆಸಿದೆ. ಬಿಜೆಪಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ,ಎಸ್ಟಿ ಶಾಸಕರು ಬೆನ್ನಲುಬಿಗೆ ನಿಂತಿದ್ದಾರೆ. ಸಮಾಜ ಬಿಜೆಪಿಯನ್ನ ಬೆಂಬಲಿಸುತ್ತಿದೆ ಎಂದರು.

ಯಡಿಯೂರಪ್ಪ ಅವರು 6,900 ಸಮುದಾಯ ಭವನ ಮಂಜೂರು ಮಾಡಿದ್ದಾರೆ. 824 ವಸತಿ ಶಾಲೆ, 4,709 ಹಾಸ್ಟೆಲ್‌ಗ‌ಳಲ್ಲಿ ಒಟ್ಟಾರೆ 4 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲಾಗುತ್ತಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ 24 ಗಂಟೆಯಲ್ಲಿ 4.42 ಕೋಟಿ ಅನುದಾನ ಮಂಜೂರು ಮಾಡುವಂತೆ ತಮಗೆ ಸೂಚಿಸಿದ್ದರು. ಅದರಂತೆಯೇ ಅನುದಾನ ಬಿಡುಗಡೆ ಮಾಡಲಾಗಿದೆ. ಯಡಿಯೂರಪ್ಪ ಅವರು ದೀನ-ದಲಿತರ ಕಲ್ಯಾಣಕ್ಕೆ ಎಂದೆಂದಿಗೂ ಹಿಂದೆ-ಮುಂದೆ ನೋಡಿದವರೇ ಅಲ್ಲ ಎಂದು ತಿಳಿಸಿದರು.

Advertisement

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮಾತನಾಡಿ, ರಾಮಾಯಣದಂತಹ ಜಗತ್ತಿನ ಶ್ರೇಷ್ಠ ಗ್ರಂಥ ಬರೆದಿರುವ ವಾಲ್ಮೀಕಿಯವರು ಪರಿವರ್ತನೆಯ ಹರಿಕಾರರು. ವಾಲ್ಮೀಕಿಯವರು ವಚನಬದ್ಧತೆ, ಸ್ವಾಮಿ ನಿಷ್ಠೆ, ಅಧರ್ಮದ ವಿರುದ್ಧದ ಹೋರಾಟದ ಬಗ್ಗೆ ರಾಮಾಯಣದಲ್ಲಿ ಬರೆದಿದ್ದಾರೆ. ಈಗಲೂ ಎಲ್ಲರೂ ಪರಿವರ್ತನೆ ಆಗಬೇಕಿದೆ ಎಂದು ತಿಳಿಸಿದರು.

ಪರಿಶಿಷ್ಟ ವರ್ಗದ ಪಟ್ಟಿಯಲ್ಲಿ ತಳವಾರ, ಪರಿವಾರ ಪರ್ಯಾಯ ಪದಗಳ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಲೋಕಸಭೆಯಲ್ಲಿ ಅನುಮೋದನೆ ದೊರೆಯಲಿದೆ. ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಯಾವತ್ತಿಗೂ ವಾಲ್ಮೀಕಿ ಸಮಾಜದೊಂದಿಗೆ ಇರುತ್ತಾರೆ. ಸರ್ಕಾರ ಸಹ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಪ್ರಾಸ್ತಾವಿಕ ಮಾತುಗಳಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಚಿವ ಬಿ.ಸಿ. ಪಾಟೀಲ್‌, ಸಂಸದರಾದ ಜಿ.ಎಂ. ಸಿದ್ದೇಶ್ವರ್‌, ವೈ. ದೇವೇಂದ್ರಪ್ಪ, ಶಾಸಕರಾದ ಎಸ್‌.ವಿ. ರಾಮಚಂದ್ರ, ಪ್ರೊ. ಎನ್‌. ಲಿಂಗಣ್ಣ, ನೆಹರೂ ಚ. ಓಲೇಕಾರ, ಎನ್‌.ವೈ. ಗೋಪಾಲಕೃಷ್ಣ, ರಾಜಾ ವೆಂಕಟಪ್ಪ ನಾಯಕ್‌, ಬಸವರಾಜ್‌ ದದ್ದಲ್‌, ಅರವಿಂದ್‌ ಬೆಲ್ಲದ್‌, ಅಮೃತ್‌ ದೇಸಾಯಿ, ಕುಸುಮಾ ಶಿವಳ್ಳಿ, ಮಾಜಿ ಶಾಸಕ ಬಿ.ಪಿ. ಹರೀಶ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next