Advertisement

ದಾವಣಗೆರೆ: 11 ತಿಂಗಳ ಮಗುವಿನೊಂದಿಗೆ ಮಹಿಳೆ ನೇಣಿಗೆ ಶರಣು

05:22 PM Jun 14, 2022 | Team Udayavani |

ದಾವಣಗೆರೆ: ಪುಟ್ಟ ಮಗುವಿನೊಂದಿಗೆ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ.ಮೃತರನ್ನು 25 ವರ್ಷದ ನಿಖಿತಾ ಹಾಗೂ 11 ತಿಂಗಳ ಮಗು ಅನೀಶ್ ಎಂದು ಗುರುತಿಸಲಾಗಿದೆ.

Advertisement

ಜಗಳೂರು ಪಟ್ಟಣದ ಜೆಸಿಆರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ.ಮೊದಲು ಮಗನಿಗೆ ನೇಣು ಬಿಗಿದು ನಂತರ ತಾನು ಅದೇ ಹಗ್ಗದಲ್ಲಿ ನೇಣಿಗೆ ಶರಣಾಗಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಇಂಜಿನಿಯರ್ ಮನೋಜ್ ಕುಮಾರ್ ಪತ್ನಿ ನಿಖಿತಾ ಸೋಮವಾರ ತವರೂರು ಜಗಳೂರಿಗೆ ಬಂದಿದ್ದರು. ಮಂಗಳವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿಖಿತಾ ತಂದೆ ತಾಯಿಯರಿಬ್ಬರೂ ಶಿಕ್ಷಕರಾಗಿದ್ದು, ಅವರು ಬೆಳಗ್ಗೆ ಶಾಲೆಗೆ ಹೋದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next