Advertisement

ರಿಜ್ವಿಗೆ ಪಾತಕಿ ದಾವೂದ್‌ ಬೆದರಿಕೆ ಕರೆ

06:05 AM Jan 15, 2018 | Harsha Rao |

ಲಕ್ನೋ: ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸಿಂ ರಿಜ್ವಿ ಅವರಿಗೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನಿಂದ ಬೆದರಿಕೆ ಕರೆ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಶನಿವಾರ ರಾತ್ರಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ತನ್ನನ್ನು ತಾನು ದಾವೂದ್‌ನ ಸಹಚರ ಎಂದು ಹೇಳಿಕೊಂಡಿದ್ದಲ್ಲದೆ, ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಇಲ್ಲವಾಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾಗಿ ರಿಜ್ವಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮದರಸಾಗಳಲ್ಲಿ ಭಯೋತ್ಪಾದಕರನ್ನು ಹುಟ್ಟುಹಾಕಲಾಗುತ್ತಿದೆ. ಹಾಗಾಗಿ, ದೇಶದಲ್ಲಿನ ಮದರಸಾಗಳನ್ನು ಮುಚ್ಚಬೇಕು ಎಂದು ಕೋರಿ ಪ್ರಧಾನಿ ಮೋದಿ ಅವರಿಗೆ ರಿಜ್ವಿ ಪತ್ರ ಬರೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Advertisement

ರಿಜ್ವಿ ಅವರ ದೂರಿನ ಆಧಾರದಲ್ಲಿ ಲಕ್ನೋ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾನುವಾರ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ರಿಜ್ವಿ, “ಮದರಸಾ ಶಿಕ್ಷಣದ ವಿರುದ್ಧ ನೀಡಿದ ಹೇಳಿಕೆಯಿಂದ ದಾವೂದ್‌ ಆಕ್ರೋಶಗೊಂಡಿದ್ದಾರೆ. ಕೂಡಲೇ ನೀವು ಮೌಲಾನಾಗಳ ಕ್ಷಮೆ ಕೋರಬೇಕು. ಇಲ್ಲದಿದ್ದರೆ, ನೀವು ಮತ್ತು ನಿಮ್ಮ ಕುಟುಂಬವನ್ನು ಕೊಲ್ಲುತ್ತೇವೆ,’ ಎಂದು ಕರೆ ಮಾಡಿದ ವ್ಯಕ್ತಿ ಬೆದರಿಸಿದ್ದಾನೆ ಎಂದು ಹೇಳಿದ್ದಾರೆ.

ಕಳೆದ ವಾರವಷ್ಟೇ ಮದರಸಾಗಳನ್ನು ಮುಚ್ಚು ವಂತೆ ಕೋರಿ ರಿಜ್ವಿ ಅವರು ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿಗೆ ಪತ್ರ ಬರೆದಿದ್ದರು. ಅದಕ ‌ೂR ಮೊದಲು ಅವರು ಅಯೋಧ್ಯೆಯ ವಿವಾದಿತ ಜಾಗದಲ್ಲಿ ಮಂದಿರವೇ ನಿರ್ಮಾಣ ವಾಗಲಿ, ಮಸೀದಿಯನ್ನು ಲಕ್ನೋದಲ್ಲಿ ನಿರ್ಮಿಸಿ ಎಂದು ಹೇಳಿದ್ದರು. ಈ ಕುರಿತ ತಮ್ಮ ನಿಲುವನ್ನು ಬೆಂಗಳೂರಿಗೆ ಬಂದು ಆರ್ಟ್‌ ಆಫ್ ಲಿವಿಂಗ್‌ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರಿಗೂ ಅರಿಕೆ ಮಾಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next