Advertisement

ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹ: ಅಹೋರಾತ್ರಿ ಧರಣಿ

01:50 AM Nov 28, 2018 | Team Udayavani |

ಉಡುಪಿ: ಜಿಲ್ಲೆಯಲ್ಲಿ ಜನರನ್ನು ತೀವ್ರವಾಗಿ ಕಾಡುತ್ತಿರುವ ಮರಳು ಸಮಸ್ಯೆಯನ್ನು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಸತ್ಯಾಗ್ರಹ ಕಟ್ಟೆಯಲ್ಲಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್‌ ಜಿಲ್ಲೆಯ ಸಮಸ್ಯೆಯಾಗಿದ್ದ ಮರಳು ಸಮಸ್ಯೆ ರಾಜ್ಯದ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ನಿರ್ವಹಿಸಲು ಜನಪ್ರತಿನಿಧಿಗಳು ವಿಫ‌ಲರಾಗಿದ್ದಾರೆ. ಈ ವಿಫ‌ಲತೆಗೆ ಕಾರಣ ಭ್ರಷ್ಟಾಚಾರ. ಇದರಿಂದ ಇಷ್ಟೆಲ್ಲ ಸಮಸ್ಯೆ ಉದ್ಭವಿಸಲು ಕಾರಣವಾಗಿದೆ. 

Advertisement

ಈಗ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಹೋಗುತ್ತಿದ್ದಾರೆ. ನಾವು ಚಿಕ್ಕವರಿದ್ದಾಗ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳನ್ನು ತೆಗೆಯುತ್ತಿರಲಿಲ್ಲ. ಏಕೆಂದರೆ ಉಪ್ಪು ನೀರಿನ ಮರಳನ್ನು ಬಳಕೆ ಮಾಡಿದ್ದಲ್ಲಿ ಆ ಕಟ್ಟಡಕ್ಕೆ ಬಾಳಿಕೆ ಕಡಿಮೆ. ಈಗ ಇವರ ಭ್ರಷ್ಟಾಚಾರದಿಂದ ಎಲ್ಲ ಮರಳನ್ನು ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡುತ್ತಿದ್ದಾರೆ. ಇದರ ಪರಿಣಾಮವನ್ನು ಮುಂದೆ ನಾವೇ ಅನುಭವಿಸಬೇಕು ಎಂದರು.

ಪಾಲನೆಯಾಗದ ಸುಪ್ರೀಂ ಆದೇಶ
ದೇಶದಲ್ಲಿ ರಾಮಮಂದಿರ ವಿವಾದ, ಶಬರಿಮಲೆ ವಿವಾದಗಳ ನಡುವೆ ಸುಪ್ರೀಂಕೋರ್ಟ್‌ ಆದೇಶವನ್ನು ಧಿಕ್ಕರಿಸುವ ಹಂತಕ್ಕೆ ಕೇಂದ್ರ ಸರಕಾರ ಹೋಗಿದೆ. ಸುಪ್ರೀಂ ಕೋರ್ಟ್‌ನ ಯಾವುದೇ ಆದೇಶಗಳೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ಶಂಕರ್‌ ಹೇಳಿದರು. ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಶೇಖರ್‌ ಬಂಗೇರ, ಸುರೇಶ್‌ ಕಲ್ಲಾಗರ, ಕವಿರಾಜ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next