Advertisement

ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸರು ಮುಂಬೈನಿಂದ ವರ್ಗಾವಣೆ

01:35 PM May 07, 2021 | Team Udayavani |

ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.

Advertisement

ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ:ಕೋವಿಡ್ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡಿದ ವಿರಾಟ್ ಕೊಹ್ಲಿ

ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ ಪ್ರಕರಣದಲ್ಲ ದಯಾ ನಾಯಕ್ ಅವರು ಹಲವು ಸಾಕ್ಷ್ಯಗಳನ್ನು ಒಟ್ಟುಗೂಡಿಸಿದ್ದರು. ಸದ್ಯ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ.

ಸಚಿನ್ ವಾಜೆ ಪ್ರಕರಣ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲನ ಉಂಟು ಮಾಡಿದೆ. ಸದ್ಯ ದಯಾ ನಾಯಕ್ ಸೇರಿದಂತೆ ಹಲವು ಪ್ರಮುಖ ಪೊಲೀಸ್ ಅಧಿಕಾರಿಗಳ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

Advertisement

ಇದನ್ನೂ ಓದಿ: ರಾಜಸ್ಥಾನ್, ಮಧ್ಯಪ್ರದೇಶದಲ್ಲಿ 100 ರೂಪಾಯಿ ಗಡಿದಾಟಿದ ಪೆಟ್ರೋಲ್ ಬೆಲೆ!

Advertisement

Udayavani is now on Telegram. Click here to join our channel and stay updated with the latest news.

Next