Advertisement

ಕೈಗೆ ಇನಾಂದಾರ ರಾಜೀನಾಮೆ 

06:30 AM Apr 19, 2018 | Team Udayavani |

ಬೆಳಗಾವಿ: ಕಿತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆಯಲ್ಲಿ ಪಕ್ಷದ ವರಿಷ್ಠರ ವಿಳಂಬ ಧೋರಣೆಯಿಂದ ಬೇಸತ್ತು ಶಾಸಕ, ಹಿರಿಯ ಮುಖಂಡ ಡಿ.ಬಿ.ಇನಾಂದಾರ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರಗೆ ಪತ್ರ ನೀಡಿದ್ದಾರೆ. ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ಅವರು,”ಕಾಂಗ್ರೆಸ್‌ ಪಕ್ಷದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಯಿತು. ಎಲ್ಲ ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಿದ ಸಂದರ್ಭದಲ್ಲಿ ಕಿತ್ತೂರು ಹೆಸರನ್ನು ಮಾತ್ರ ಬಾಕಿ ಉಳಿಸಲಾಯಿತು. ನನಗೆ ಟಿಕೆಟ್‌ ತಪ್ಪಿಸಬೇಕು ಎಂಬ ಉದ್ದೇಶದಿಂದಲೇ ವಿಳಂಬ ಮಾಡಲಾಗಿದೆ.

ದೆಹಲಿಯಲ್ಲಿ ಮಾತುಕತೆ ನಡೆಸಿದರೆ ಅಲ್ಲಿಯೂ ಸರಿಯಾದ ಗೌರವ ಸಿಗಲಿಲ್ಲ. ಪಕ್ಷದ ಧೋರಣೆಗೆ ಮನನೊಂದು ರಾಜೀನಾಮೆ ಸಲ್ಲಿಸಿದ್ದೇನೆ. ನನಗೆ ಯಾವುದೇ ಪಕ್ಷದಿಂದ ಆಹ್ವಾನ ಬಂದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಹಾಗೂ ಬೆಂಬಲಿಗರ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next