Advertisement

ಆ.1ರಿಂದ ಮರಳುಗಾರಿಕೆಗೆ ಡಿಸಿ ಭರವಸೆ: ಶಾಸಕ ಭಟ್

02:56 AM May 29, 2019 | sudhir |

ಉಡುಪಿ: ಜಿಲ್ಲೆಯ ಸಿಆರ್‌ಝಡ್‌ವ್ಯಾಪ್ತಿಯಲ್ಲಿ ಆ.1ರಿಂದ ಮರಳುಗಾರಿಕೆ ಆರಂಭಿಸುವುದಾಗಿ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Advertisement

ಮೇ 28ರಂದು ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಮರಳು ಪರವಾನಿಗೆದಾರರಿಗೂ ಅನುಮತಿ ನೀಡುವ ಬಗ್ಗೆ ಡಿಸಿಯವರ ಗಮನ ಸೆಳೆದಿದ್ದೇವೆ. ಆ.1ರಿಂದ ಯಾವುದೇ ಕಾರಣಕ್ಕೂ ಹಿನ್ನಡೆಯಾಗದೆ ಮರಳುಗಾರಿಕೆ ಆರಂಭಿಸಲು ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಭಟ್ ತಿಳಿಸಿದ್ದಾರೆ.

ಸಭೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್‌. ಮೆಂಡನ್‌, ಸುಕುಮಾರ ಶೆಟ್ಟಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next