Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಸಂಬಂಧ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚುನಾವಣಾ ಆಯೋಗವು ಪ್ರಮಾಣಿತಕಾರ್ಯನಿರ್ವಹಣಾ ಪದ್ಧತಿ (ಎಸ್ಒಪಿ) ರಚಿಸಿದೆ. ಇದರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿಪಾಲಿಸಬೇಕು. ಚುನಾವಣಾ ತರಬೇತಿ,ಕಾರ್ಯನಿರ್ವಹಣೆ, ಚುನಾವಣಾ ಪ್ರಚಾರ, ಮಸ್ಟರಿಂಗ್, ಡಿ ಮಸ್ಟರಿಂಗ್, ಮತದಾನ, ಎಣಿಕಾ ಕೇಂದ್ರ ಸೇರಿದಂತೆ ಹಲವಾರು ಹಂತಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.
Related Articles
Advertisement
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಡಿವೈಎಸ್ಪಿ ಪ್ರಿಯದರ್ಶಿನಿ, ಜಿಲ್ಲಾ ಲಸಿಕಾ ಅಧಿಕಾರಿ ವಿಶ್ವೇಶ್ವರಯ್ಯ, ಜಿಪಂ ಉಪ ಕಾರ್ಯದರ್ಶಿ ಧರಣೇಶ್, ತಹಶೀಲ್ದಾರರಾದ ನಂಜುಂಡಯ್ಯ, ಸುದರ್ಶನ್, ಕೆ. ಕುನಾಲ್, ಚಿದಾನಂದ ಗುರುಸ್ವಾಮಿ, ಚುನಾವಣಾ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಪ್ರತ್ಯೇಕ ಕಂಟ್ರೋಲ್ ರೂಂ ತೆರೆಯಿರಿ : ಜಿಲ್ಲೆ ಮತ್ತು ತಾಲೂಕಿನಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ತೆರೆಯಬೇಕು. ಸೂಕ್ಷ್ಮ ಅತಿಸೂಕ್ಷ್ಮ ಮತಗಟ್ಟೆ ಗುರುತಿಸಿ ಪೊಲೀಸ್ ಇಲಾಖೆ ಬಂದೋಬಸ್ತ್ ತಯಾರಿ ಮಾಡಿ ಕೊಳ್ಳಬೇಕು. ನಿರ್ಭೀತಿಯಿಂದ ಚುನಾವಣೆ ನಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳ ಬೇಕು. ಅಕ್ರಮ ಮದ್ಯ ಮಾರಾಟ, ಹಂಚಿಕೆ, ಸಾಗಣೆಗೆ ಅವಕಾಶವಾಗದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಕಂಟ್ರೋಲ್ ರೂಂ ಸ್ಥಾಪನೆ ಸಿಬ್ಬಂದಿ ನಿಯೋಜಿಸಬೇಕು ಎಂದು ಡಾ. ರವಿ ತಿಳಿಸಿದರು.