Advertisement
ಶನಿವಾರ ರಾತ್ರಿ ಕಾಳಾವರದ ರಾಘವೇಂದ್ರ (36), ಕಂಡೂÉರಿನ ಫಯಾಜ್ ಅಹ್ಮದ್ (22), ಮುಶಿನ್ (23), ಮಹಮ್ಮದ್ ಯಾಸಿನ್ (20) ಮೂಡುಬಗೆಯ ಮಹಮ್ಮದ್ ಅಫìತ್ (23) ಹಾಗೂ ರವಿವಾರ ಮಧ್ಯಾಹ್ನ ಕಂಡೂÉರಿನ ಸಂಜೀವ (44) ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕಂಡೂÉರಿನ ಮಹಿಳೆಯರ ಸಹಿತ ಸ್ಥಳೀಯರು ಕುಂದಾಪುರ ಠಾಣಾಧಿಕಾರಿ ಹಾಗೂ ಕಂಡೂÉರು ಠಾಣಾಧಿಕಾರಿ ವಿರುದ್ಧ ಆರೋಪ ಮಾಡಿದರು. ಕಂಡೂÉರು ಠಾಣೆಗೆ ತೆರಳಿ ಠಾಣಾಧಿಕಾರಿಗಳಲ್ಲಿ ಅಮಾಯಕರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ಬಗ್ಗೆ ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಅದೇ ರೀತಿ ಕಂಡೂÉರಿನವರು ಉಡುಪಿ ನಗರ ಠಾಣೆಗೂ ಆಗಮಿಸಿ ಅಧಿಕಾರಿಗಳಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
Related Articles
ರವಿವಾರದ ವರೆಗೆ ಒಟ್ಟು 21 ಆರೋಪಿಗಳ ಬಂಧನವಾಗಿದೆ. ಇನ್ನೂ ಹಲವು ಆರೋಪಿಗಳ ಬಂಧನವಾಗಲೂಬಹುದು. ಪೊಲೀಸ್ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣದ ಮತ್ತಷ್ಟು ಆರೋಪಿಗಳ ಪತ್ತೆ ಕಾರ್ಯಕ್ಕೆ ಶ್ರಮ ವಹಿಸುತ್ತಿದೆ ಎಂದು ಎಸ್ಪಿ ಕೆ.ಟಿ. ಬಾಲಕೃಷ್ಣ ಹೇಳಿದ್ದಾರೆ.
Advertisement