Advertisement

ಕೋವಿಡ್ ಸೆಂಟರ್ ನಲ್ಲಿ ಹೋಮ:ರೇಣುಕಾಚಾರ್ಯರಿಗೆ ನೊಟೀಸ್ ನೀಡಲು ಸೂಚಿಸಿದ ಜಿಲ್ಲಾಧಿಕಾರಿ

06:14 PM Jun 12, 2021 | Team Udayavani |

ದಾವಣಗೆರೆ: ಹೊನ್ನಾಳಿ ತಾಲೂಕು ಅರಬಗಟ್ಟೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಹೋಮ ನಡೆಸಿದ್ದ  ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ನೊಟೀಸ್ ನೀಡುವಂತೆ ಹೊನ್ನಾಳಿ ತಹಸೀಲ್ದಾರರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

Advertisement

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ  ಈ ಕುರಿತು ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿದೆ. ಆದ್ದರಿಂದ ಹೊನ್ನಾಳಿ ಶಾಸಕರಿಗೆ ನೊಟೀಸ್ ನೀಡುವಂತೆ ತಹಸೀಲ್ದಾರರಿಗೆ ಸೂಚನೆ ನೀಡಿದ್ದು ವಿಪತ್ತು ನಿರ್ವಹಣಾ ಕಾಯಿದೆಯಡಿ ಕ್ರಮವಹಿಸಲಾಗುವುದು ಎಂದರು.

ಇದನ್ನೂ ಓದಿ: ಬ್ಯಾಟ್ ನಿಂದ ತಲೆಗೆ ಹೊಡೆದು ಸಹೋದರಿಯನ್ನು ಕೊಲೆಗೈದ ಸಹೋದರ: ಆರೋಪಿಯನ್ನು ಬಂಧಿಸಿದ ಪೋಲಿಸರು

ಕೋವಿಡ್ ನಿಯಂತ್ರಣಕ್ಕಾಗಿ ಪ್ರಾರ್ಥಿಸಿ ರೇಣುಕಾಚಾರ್ಯ ಶುಕ್ರವಾರ ಮೃತ್ಯುಂಜಯ ಮತ್ತು ಧನ್ವಂತರಿ ಹೋಮ ನಡೆಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುವ ಜತೆಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ  ಹೊನ್ನಾಳಿ ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ರೇಣುಕಾಚಾರ್ಯ ವಿರುದ್ಧ  ಪ್ರಕರಣ ದಾಖಲಿಸುವುದಾಗಿ ಹೇಳಿದ್ದರು. ಆದರೆ, ಇದಕ್ಕೆ ಸೋಂಕಿತರು ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಈ ನಡುವೆ ರೇಣುಕಾಚಾರ್ಯ, ತಾವು ಲೋಕ ಕಲ್ಯಾಣಕ್ಕಾಗಿ ಹೋಮ ಮಾಡಿಸಿದ್ದು ನನ್ನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿ, ತಾಕತ್ತಿದ್ದರೆ ಕೇಸ್ ದಾಖಲಿಸಲಿ ಎಂದು ಸವಾಲು ಹಾಕಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.

Advertisement
Advertisement

Udayavani is now on Telegram. Click here to join our channel and stay updated with the latest news.

Next