Advertisement

ನಾಪತ್ತೆಯಾಗಿದ್ದ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ

01:09 AM Oct 08, 2021 | Suhan S |

ಶಿವಮೊಗ್ಗ:  ಸೆ.28 ರ ಬೆಳ್ಳೆಂಬೆಳಿಗ್ಗೆ ಐಎಎಸ್ ಅಧಿಕಾರಿಗಳ ವಿರುದ್ಧ ಆರೋಪವೆಸಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ವಾಟ್ಸಪ್ ಮೆಸೇಜ್ ಮಾಡಿದ್ದ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಗಿರಿರಾಜ್ ಕೊನೆಗೂ ಜೀವಂತವಾಗಿ ಪತ್ತೆಯಾಗಿದ್ದಾರೆ.

Advertisement

ಧರ್ಮಸ್ಥಳದ ಕಟ್ಟೆಯೊಂದರ ಮೇಲೆ ಸುಸ್ತಾಗಿ ಮಲಗಿದ್ದ ಗಿರಿರಾಜ್ ನನ್ನು ಸ್ಥಳೀಯರ ಮಾಹಿತಿ ಮೇರೆಗೆ ಪಿಎಸ್ ಐ ಕೃಷ್ಣಕಾಂತ್  ಗುರುತು ಹಿಡಿದು ಉಪಚರಿಸಿ ಧರ್ಮಸ್ಥಳದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗಿರಿರಾಜ್ ಮಿಸ್ಸಿಂಗ್ ಕೇಸ್ ಜೀವಂತವಾಗಿ ಸಿಗುವ ಮೂಲಕ ಜಿಲ್ಲಾಧಿಕಾರಿಗಾಳ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಲ್ಲಿ ಸಂತಸ ತಂದಿದೆ.

ಆದರೆ ಇವರು ಮಾಡಿರುವ ಆರೋಪಗಳು ಗಂಭೀರವಾಗಿರುವುದರಿಂದ ಇಲಾಖೆ ಹೇಗೆ ನಡೆದುಕೊಳ್ಳಲಿದೆ ಎಂಬುದೆ ಈಗ ಕುತೂಹಲದ ವಿಷಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next