Advertisement
ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಶನಿವಾರದಿಂದ ಉಡುಪಿ ಜಿಲ್ಲೆಯ ಸಂಪರ್ಕ ಗಡಿಗಳನ್ನು ಸಂಪೂರ್ಣ ಬಂದ್ಗೆ ಸೂಚನೆ ನೀಡಿದ್ದಾರೆ. ಜಿಲ್ಲೆಗೆ ಅನ್ಯ ಜಿಲ್ಲೆಗಳಿಂದ ಬರುವುದನ್ನು ತಪ್ಪಿಸಲು ಮತ್ತು ಜಿಲ್ಲೆಯಿಂದ ಹೊರಗಡೆ ಹೋಗುವುದಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇನ್ನು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾರ್ವಜನಿಕರು ಅನಗತ್ಯವಾಗಿ ಆಗಮಿಸುವುದಕ್ಕೆ ಪೂರ್ಣ ಪ್ರಮಾಣದಲ್ಲಿ ನಿರ್ಬಂಧ ವಿಧಿಸಲಾಗಿದೆ.
ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೆಲವರು ಸಣ್ಣಪುಟ್ಟ ಕಾರಣಕ್ಕೆ ಕಚೇರಿಗೆ ಬರುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು ವೈದ್ಯಕೀಯ ದೃಢಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿಯನ್ನು ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ.
-ಜಿ. ಜಗದೀಶ್, ಜಿಲ್ಲಾಧಿಕಾರಿ