Advertisement

ಮಂಗಳೂರಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ : ಜಿಲ್ಲಾಧಿಕಾರಿ ರಾಜೇಂದ್ರ

05:55 PM Mar 22, 2021 | Team Udayavani |

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಮಂಗಳೂರಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದ್ದಾರೆ.

Advertisement

ಈ ಬಗ್ಗೆ ಮಂಗಳೂರಲ್ಲಿ ಸಾಂಕೇತಿಕವಾಗಿ ಡಿಸಿ, ಡಿಸಿಪಿ, ಆರೋಗ್ಯಾಧಿಕಾರಿ ಮೂಲಕ ಕಾರ್ಯಾಚರಣೆ ನಡೆಸಿ ಮಾತನಾಡಿರುವ ಡಿಸಿ, ಕೊರೊನಾ ಎರಡನೇ ಅಲೆ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಜನರಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಗಳ ಯೋಜನೆ ಮಾಡಲಾಗಿದೆ. ಪ್ರತಿದಿವಸ ಒಂದು ಗಂಟೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಟೋ ಚಾಲಕರು, ಪ್ರಯಾಣಿಕರು ಮಾಸ್ಕ್ ಧರಿಸಲೇಬೇಕು. ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಕಡ್ದಾಯ ಮಾಡಲಾಗಿದೆ. ಸಾರ್ವಜನಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಠಿಣ ನಿಯಮ ತರಲು ಚಿಂತನೆ ನಡೆಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಮಾಸ್ಕ್ ಧರಿಸದ ಪ್ರಕರಣ ಕಂಡು ಬರುತ್ತಿವೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next