Advertisement

ಜಿಂದಾಲ್‌ಗೆ ಡಿಸಿ-ಎಸ್‌ಪಿ ಭೇಟಿ-ಪರಿಶೀಲನೆ

07:41 AM Jun 19, 2020 | Suhan S |

ಬಳ್ಳಾರಿ: ಕೋವಿಡ್ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾಗಿರುವ ಜಿಂದಾಲ್‌ ಕಾರ್ಖಾನೆಗೆ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌, ಎಸ್ಪಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತರಾದ ಶೇಖ್‌ ತನ್ವೀರ್‌ ಅಸೀಫ್‌, ರಮೇಶ ಕೋನರೆಡ್ಡಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸೀಲ್‌ ಡೌನ್‌ ಮಾಡಲಾಗಿರುವುದನ್ನು ಪರಿಶೀಲಿಸಿದರು ಮತ್ತು ಕೋವಿಡ್‌ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಡಿಸಿ ಮತ್ತು ಎಸ್ಪಿ ಅವರು ಜಿಂದಾಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಂದಾಲ್‌ನ ಮಂಜುನಾಥ ಪ್ರಭು ಅವರು ಇದುವರೆಗೆ ಜಿಲ್ಲಾಡಳಿತದ ಸೂಚನೆಯಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರಣೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next