Advertisement

ಸುರೇಬಾನ ಬಾಲಕ ಜ್ವರದಿಂದ ಸಾವು ಪ್ರಕರಣ : ತನಿಖೆಗೆ ಡಿಸಿ ಅದೇಶ

09:17 AM Sep 11, 2019 | Team Udayavani |

ಬೆಳಗಾವಿ: ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಬಾಲಕ ಜ್ವರದಿಂದ ಮೃತಪಟ್ಟಿದ್ದು, ಡಿಎಚ್ ಒ ಅವರಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್ .ಬಿ. ಬೊಮ್ಮನಹಳ್ಳಿ ಸ್ಪಷ್ಟನೆ ನೀಡಿದರು.

Advertisement

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8ನೇ ತಾರಿಖಿನಂದು ಏಕಾಏಕಿ ನೀರು ಬಂದಿರುವುದರಿಂದ ಗ್ರಾಮವನ್ನು ಸ್ಥಳಾಂತರ ಮಾಡಲಾಗಿದೆ. ಪುನರ್ವಸತಿ ಕೇಂದ್ರದಲ್ಲಿದ್ದಾಗ ಬಾಲಕ ಜ್ವರದಿಂದ ಸಾವನ್ನಪ್ಪಿದ್ದಾನೆ.

ಸದ್ಯ ಪೋಷಕರಿಂದ ಮತ್ತು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ಸಾವಿನ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದರಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಕೊಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next