Advertisement

ಜೂ. 18: ಆಲಂಕಾರು, ಪೇತ್ರಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

12:11 AM Jun 17, 2022 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜೂ. 18ರಂದು ಕಡಬ ತಾಲೂಕಿನ ಆಲಂಕಾರು ಗ್ರಾಮದ (ದೀನ್‌ ದಯಾಳು, ರೈತ ಸಭಾಭವನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ)ಲ್ಲಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲಿ, ಆಲಂಕಾರು ಗ್ರಾಮ ಪಂಚಾಯತ್‌ಗೆ ನೀಡಬಹುದು.

ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳದಲ್ಲಿ ಬಗೆಹರಿಯದ ಸಮಸ್ಯೆಯಾಗಿದ್ದಲ್ಲಿ ಮುಂದಿನ ಸೂಕ್ತ ದಿನವನ್ನು ನಿರ್ಧರಿಸಿ ಅದೇ ಗ್ರಾಮದಲ್ಲಿ ಮತ್ತೂಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾದಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಪೇತ್ರಿಯ ಯುವಕ ಮಂಡಲದ ವಠಾರದಲ್ಲಿ ಬೆಳಗ್ಗೆ 10ಕ್ಕೆ ಉಡುಪಿ ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮದ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಮುಂಚಿತವಾಗಿ ಚೇರ್ಕಾಡಿ ಗ್ರಾಮದ ಗ್ರಾಮಕರಣಿಕರ ಕಚೇರಿಯಲ್ಲಿ ನೀಡುವಂತೆ ಪ್ರಕಟನೆ ತಿಳಿಸಿದೆ.

ಚೆಟ್ಟಳ್ಳಿಯಲ್ಲಿ ಕೊಡಗು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ :

Advertisement

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಜೂ. 18ರಂದು ಬೆಳಗ್ಗೆ 10 ಗಂಟೆಗೆ ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next