Advertisement

ಜು. 16ರಂದು ಮೂಲ್ಕಿಯ ಪಂಜದಲ್ಲಿ ಡಿಸಿ ಗ್ರಾಮ ವಾಸ್ತವ್ಯ 

12:10 AM Jul 15, 2022 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಜು. 16ರಂದು ಮೂಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೊಭ ಭಜನ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

Advertisement

ಗ್ರಾಮ ಲೆಕ್ಕಾಧಿಕಾರಿಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ. ಸಾರ್ವ ಜನಿಕರು ನೇರವಾಗಿ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲಿ, ಪಂಜ ಗ್ರಾ.ಪಂ.ಗೆ ನೀಡಬಹುದಾಗಿದೆ.

ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next