Advertisement
ಸರ್ಕಾರವು ಕೋಟೆ ಮೇಲ್ಚಾವಣಿ ದುರಸ್ತಿ ಕಾರ್ಯಕ್ಕೆ ಒಟ್ಟು 54 ಲಕ್ಷ ರೂ. ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ 40 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.ಪಾರಂಪರಿಕ ವಾಸ್ತುಶಿಲ್ಪ ಹೊಂದಿರುವ ಮಡಿಕೇರಿಯ ಐತಿಹಾಸಿಕ ಅರಮನೆ ಮತ್ತು ಕೋಟೆ ಆವರಣವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಕಂದಾಯ ಇಲಾಖೆಯು ಈಗಾಗಲೇ 8 ಕೋಟಿ ರೂ. ಅನುದಾನಕ್ಕೆ ಮಂಜೂರಾತಿ ನೀಡಿದ್ದು, ಹೆಚ್ಚುವರಿಯಾಗಿ 2 ಕೋಟಿ ರೂ. ಅನುಧಾನಕ್ಕೆ ಬೇಡಿಕೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.