Advertisement

ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ

02:53 PM Jun 16, 2021 | Team Udayavani |

ಬೆಂಗಳೂರು: ನಮ್ಮ ಪಕ್ಷಕ್ಕೆ ಪ್ಲಾನೆಟ್ ನಿಂದ ಯಾರೂ ಬಂದಿಲ್ಲ. ನಮ್ಮಲ್ಲಿ ಹೊರಗಿನವರು ಯಾರೂ ಇಲ್ಲ, ಎಲ್ಲರೂ ನಮ್ಮವರೆ. ನಮ್ಮ ಸರ್ಕಾರದ ಅಂಗವಾಗಿದ್ದಾರೆ, ಪಕ್ಷದ ಭಾಗವಾಗಿದ್ದಾರೆ. ಈಗ ನಮ್ಮ ಜೊತೆ ಇದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

Advertisement

ಸಚಿವ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಂದವರು ನಮ್ಮ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಬೇರೆ ಪಕ್ಷ ತ್ಯಜಿಸಿ ಬಂದವರೆಲ್ಲಾ ನಮ್ಮವರೇ. ಇವತ್ತೇ ಅಲ್ಲಾ ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ  ಎಂದ ಅವರು, ಹಿರಿಯ ನಾಯಕರ ಹೇಳಿಕೆ ಬಗ್ಗೆ ಹೆಚ್ಚು ಮಾತನ್ನಾಡುವುದಿಲ್ಲ ಎಂದರು.

ಇದನ್ನೂ ಓದಿ:ರಾಜ್ಯಕ್ಕಿಂದು ‘ಅರುಣಾ’ಗಮನ: ಕಮಲ ಪಾಳಯದಲ್ಲಿ ಕಳವಳ, ಬಿರುಸುಗೊಂಡ ಚಟುವಟಿಕೆ

ಅರುಣ್ ಸಿಂಗ್ ರಾಜ್ಯ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಸಮಾಲೋಚನೆ ನಡೆಯುವುದು ಸಹಜ. ಅದರಂತೆ ಈಗ ಶಾಸಕರ ಜೊತೆ ಸಮಾಲೋಚನೆ ನಡೆಯುತ್ತಿದೆ. ಕೋರ್‌ ಕಮಿಟಿ ಮೀಟಿಂಗ್ ನಡೆಯಲಿದೆ. ಆಡಳಿತಾತ್ಮಕವಾಗಿ ಹೇಗೆ ನಡೆಯುತ್ತಿದೆ, ಪಕ್ಷ ಸಂಘಟನೆ ಸೇರಿದಂತೆ ಹಲ‌ವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ವಿಶೇಷ ಏನೂ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next