Advertisement

Dharmasthala: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್

12:42 PM Mar 26, 2024 | Team Udayavani |

ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ(ಮಾ.26 ರಂದು) ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

Advertisement

ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಮೈಸೂರು ಜಿಲ್ಲೆಗಳಿಗೆ ಖಾಸಗಿ ಪ್ರವಾಸ ಕೈಗೊಂಡಿರುವ ಅವರು,ಮಂಗಳವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಡಿಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಫ್ರೀಆಗಿ ಬಸ್ ನಲ್ಲಿ ಓಡಾಡ್ತಿದ್ದಾರೆ. ತೀರ್ಥಯಾತ್ರೆ ನಡೆಯುತ್ತಿದೆ. ವ್ಯವಹಾರ ನಡೆಯುತ್ತಿದೆ.  ನಾವು ಜನ ಕೊಟ್ಟ ಶಕ್ತಿಯ ಋಣ ತೀರಿಸುತ್ತೇವೆ. ಮಂಜುನಾಥ ದೇವರು ನುಡಿದಂತೆ ನಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ ಎಂದಿದ್ದಾರೆ.

ಪಕ್ಷದ ಪ್ರಮುಖ ಮುಖಂಡರುಗಳಾದ ಮಿಥುನ್ ರೈ,  ರಕ್ಷಿತ್ ಶಿವರಾಂ,  ನಾಗೇಶ್ ಕುಮಾರ್ , ರಂಜನ್ ಗೌಡ, ಅಭಿನಂದ್ ಹರೀಶ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next