Advertisement

ಬೆಂಗಳೂರಿನ ಎ ಎಸ್‌ ಸಿ ಕೇಂದ್ರದಲ್ಲಿ ಕೋವಿಡ್‌ ಕೇರ್ ಸೆಂಟರ್ : ಡಾ.ಸಿ.ಎನ್.‌ ಅಶ್ವತ್ಥನಾರಾಯಣ

05:48 PM May 18, 2021 | Team Udayavani |

ಬೆಂಗಳೂರು : ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್‌ ಆಸ್ಪತ್ರೆ ಬಳಿ ಇರುವ ಸೇನೆಗೆ ಸೇರಿದ ಎ ಎಸ್‌ ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ‌ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

Advertisement

ಮಂಗಳವಾರ(ಮೇ. 18) ಎ ಎಸ್‌ ಸಿ ಕಮಾಂಡರ್‌ ಲೆಫ್ಟಿನೆಂಟ್‌ ಬಿ.ಕೆ.ರೆಸ್‌ ಪಾಸ್‌ ವಾಲ್‌ ಅವರೊಂದಿಗೆ ಚರ್ಚಿಸಿದ  ಡಿಸಿಎಂ ಅಶ್ವತ್ಥನಾರಾಯಣ, ಎ ಎಸ್‌ ಸಿ ಸೆಂಟರ್‌ ನಲ್ಲಿ ಕೊನೆ ಪಕ್ಷ 500 ಬೆಡ್‌ ಗಳ ಕೋವಿಡ್‌ ಕೇಂದ್ರ ಸ್ಥಾಪನೆಯ ಪ್ತಸ್ತಾಪನೆಯನ್ನು ಮುಂದಿಟ್ಟರಲ್ಲದೆ, ಈ ಕೋವಿಡ್‌ ಕೇರ್‌ಗೆ ಅಗತ್ಯವಾದ ಮೂಲಸೌಕರ್ಯವನ್ನು ಸರಕಾರ ಒದಗಿಸಲಿದೆ. ಸೇನೆ ವತಿಯಿಂದ ವೈದ್ಯರು, ಸಿಬ್ಬಂದಿ ಮತ್ತು ಅರೆವೈದ್ಯ ಸಿಬ್ಬಂದಿಯನ್ನು ಒದಗಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ : ಭೀಮಾನದಿ ಪಾತ್ರದಲ್ಲಿ ಅನಧಿಕೃತ ಮರಳು ಅಡ್ಡೆಗೆ ದಾಳಿ: 5 ಲಕ್ಷ .ರೂ ಮೌಲ್ಯದ ಮರಳು ವಶ

ಎರಡನೇ ಮತ್ತು ಮೂರನೇ ಅಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕೇಂದ್ರದಲ್ಲಿ ಕೋವಿಡ್‌ ಕೇರ್‌ ಸ್ಥಾಪನೆಗೆ ಅವಕಾಶ ನೀಡಬೇಕು. ವಿವಿಧ ಹಂತಗಳಲ್ಲಿ ಇಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಬಹುದು ಎಂದರು.

ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ.ಕೆ.ರೆಸ್‌ ಪಾಸ್‌ ವಾಲ್‌, ಕೋವಿಡ್‌ ವಿರುದ್ಧ ಸರಕಾರ ನಡೆಸುತ್ತಿರುವ ಹೋರಾಟಕ್ಕೆ ಸೇನೆಯೂ ಹೆಗಲು ಕೊಡುವ ಭರವಸೆ ನೀಡಿದರು.

Advertisement

ಈ ಸಂದರ್ಭದಲ್ಲಿ ಎ ಎಸ್‌ ಸಿ ಕೇಂದ್ರದಲ್ಲಿ ಕೋವಿಡ್‌ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಲೆಫ್ಟಿನೆಂಟ್‌ ಬಿ.ಕೆ.ರೆಸ್‌ ಪಾಸ್‌ ವಾಲ್‌ ಅವರು ಡಿಸಿಎಂ ಅವರಿಗೆ ಮಾಹಿತಿ ನೀಡಿದರಲ್ಲದೆ, ಆ ಸೌಲಭ್ಯಗಳನ್ನು ತೋರಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ಡಿಸಿಎಂ ಕಾರ್ಯದರ್ಶಿ ಪ್ರದೀಪ್‌ ಪ್ರಭಾಕರ್‌, ಭಾರತ್‌ ಸ್ಕೌಟ್ಸ್‌ & ಗೈಡ್ಸ್‌ನ ರಾಜ್ಯ ಸರಕಾರದ ಸಲಹೆಗಾರರಾದ ಜಿ.ಎಂ.ಬಾಬು ಮುಂತಾದವರು ಇದ್ದರು.

ಇದನ್ನೂ ಓದಿ : ಭಾರತದ ವನಿತಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೋವಿಡ್ ಗೆ ಬಲಿ!

Advertisement

Udayavani is now on Telegram. Click here to join our channel and stay updated with the latest news.

Next