Advertisement

ಒಡೆದ ಮನೆಯಾಗಿ ಮೂರು ಗುಂಪಾದ ಕಾಂಗ್ರೆಸ್‌: ಕಾರಜೋಳ

03:41 PM Feb 27, 2021 | Team Udayavani |

ಚಿಕ್ಕಮಗಳೂರು: ಕಾಂಗ್ರೆಸ್‌ ಒಡೆದ ಮನೆಯಾಗಿ ಮೂರು ಗುಂಪಾಗಿದೆ. ಸಿದ್ದರಾಮಯ್ಯರವರದ್ದು ಒಂದು ಗುಂಪು, ಡಿ.ಕೆ. ಶಿವಕುಮಾರ್‌ ಅವರದ್ದು ಒಂದು ಗುಂಪು, ಮಲ್ಲಿಕಾರ್ಜುನ್‌ ಖರ್ಗೆ ಅವರದ್ದು ಒಂದು ಗುಂಪು. ಈ ಮೂರು ಗುಂಪುಗಳ ನಡುವೆ 24 ಗಂಟೆಯೂ ಗುದ್ದಾಟ ನಡೆಯುತ್ತಿರುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಮೂರು ಗುಂಪುಗಳ ಗುದ್ದಾಟ ಹೊಸದಲ್ಲ. ಈ ಗುದ್ದಾಟದಿಂದಲೇ ಕಾಂಗ್ರೆಸ್‌ ನೆಲಕಚ್ಚಿದೆ ಎಂದರು. 2006 ರಲ್ಲಿ ಬಿಜೆಪಿಯವರು ಜೆಡಿಎಸ್‌ ಸೇರಲು ಸಿದ್ಧರಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಡೀ ದೇಶವೇ ಬಿಜೆಪಿಯಾಗಿದೆ. 23  ರಾಜ್ಯಗಳಲ್ಲಿ ಅಧಿ ಕಾರದಲ್ಲಿದೆ. ಇಷ್ಟು ಸ್ಥಾನಗಳು ಕುಮಾರಸ್ವಾಮಿ ಅವರ ಆಶೀರ್ವಾದದಿಂದಲೇ ಬಂದಿದೆಯಾ ಎಂದು ಪ್ರಶ್ನಿಸಿದ ಅವರು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬಿಜೆಪಿ ಸದೃಢವಾಗಿದೆ. 2009ರಲ್ಲಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ ಮುಕ್ತ ಭಾರತ ಮಾಡುತ್ತೇವೆ ಎಂದಿದ್ದರು.

ಇವತ್ತು ಕಾಂಗ್ರೆಸ್‌ ಮುಕ್ತಭಾರತವಾಗಿದೆ ಎಂದ ಅವರು ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು. ನನ್ನ ಮಗ ಎರಡೂವರೆ ತಿಂಗಳು ವೆಂಟಿಲೇಟರ್‌ನಲ್ಲಿದ್ದ. ವಿನಯ್‌ ಗುರೂಜಿಯವರು ಬೆಂಗಳೂರಿಗೆ ಬಂದು ನಿಮ್ಮ ಮಗನಿಗೆ ಏನೂ ಆಗೋದಿಲ್ಲ ಎಂದಿದ್ದರು. ನನ್ನ ಮಗ ಈಗ ಆರಾಮಾಗಿದ್ದಾನೆ. ಹಾಗಾಗಿ ಅವರ ದರ್ಶನಕ್ಕೆ ಹೋಗುತ್ತಿದ್ದೇನೆ. ಶನಿವಾರ ವಿನಯ್‌ ಗುರೂಜಿ  ಅವರನ್ನು ಭೇಟಿ ಮಾಡಿ ದರ್ಶನ ಪಡೆದುಕೊಳ್ಳುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next