Advertisement

ಗ್ರಾಮಸ್ಥರು ಪ್ರೀತಿಯಿಂದ ನೀಡಿದ ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳ

05:15 PM Dec 10, 2020 | sudhir |

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ಕಾಣಿಕೆಯಾಗಿ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

Advertisement

ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿಗಳು ಹುಟ್ಟೂರು ಕರಜೋಳ ಗ್ರಾಮದ ಗ್ರಾಮಸ್ಥರು ನನ್ನ ಮೇಲಿನ ಪ್ರೀತಿ ಅಭಿಮಾನದಿಂದ ಗ್ರಾಮದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ 140 ಗ್ರಾಂ ಬಂಗಾರದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ, ನಾನು ಶಾಸಕ, ಮಂತ್ರಿಯಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಪೀತಿ, ಗೌರವದಿಂದ ಗ್ರಾಮಸ್ಥರೆಲ್ಲರೂ ಸೇರಿ ಸನ್ಮಾನಿಸಿದ್ದಾರೆ ಆದರೆ ಈ ಸನ್ಮಾನ ನನಗೆ ಸಲ್ಲುವುದಲ್ಲ ಸರ್ಕಾರಕ್ಕೆ ಸಲ್ಲುತ್ತದೆ ಹಾಗಾಗಿ ಈ ಬಂಗಾರದ ಕಿರೀಟವು ಸರಕಾರಕ್ಕೆ ಸೇರಿದ್ದಾಗಿದೆ ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರಾದ ಶ್ರೀ ಟಿ.ಎಂ.ವಿಜಯಬಾಸ್ಕರ್ ಅವರ ಮೂಲಕ ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ತೊಕ್ಕೊಟ್ಟು: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ಅನಾಹುತ

Advertisement

Udayavani is now on Telegram. Click here to join our channel and stay updated with the latest news.

Next