Advertisement

ನಾವು ಮದ್ಯದ ಅಂಗಡಿ ತೆರೆಯುವವರಲ್ಲ, ಮುಚ್ಚುವವರು: ಡಿಸಿಎಂ ಗೋವಿಂದ ಕಾರಜೋಳ

05:20 PM Aug 08, 2020 | keerthan |

ಬಾಗಲಕೋಟೆ: ರಾಜ್ಯದ ಹಳ್ಳಿಗಳಲ್ಲಿ ಎಂಎಸ್‌ಐಎಲ್ ಮಳಿಗೆ ಆರಂಭಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ನಾವು ಮದ್ಯದ ಅಂಗಡಿ ತೆರೆಯುವವರಲ್ಲ. ಅವುಗಳನ್ನು ಮುಚ್ಚುವವರು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

Advertisement

ಶನಿವಾರ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿ ಹಳ್ಳಿಗಳಲ್ಲೂ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಮದ್ಯದ ಅಂಗಡಿ ಆರಂಭಿಸಲಾಗುತ್ತದೆ ಎನ್ನುವುದು ಸುಳ್ಳು. ಆ ರೀತಿ ನಾವು ಮಾಡುವುದಿಲ್ಲ. ನಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯುಳ್ಳವರು. ಮದ್ಯದ ಅಂಗಡಿ ಮುಚ್ಚುವುದು ಬಿಜೆಪಿಯ ನೀತಿಯಲ್ಲೊಂದು ಎಂದರು.

ಈಗಿರುವ ಮದ್ಯದ ಅಂಗಡಿಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಹೊಸ ಅಂಗಡಿ ತೆರೆಯಲ್ಲ. ಅದು ನಮ್ಮ ಆದ್ಯತೆಯೂ ಅಲ್ಲ. ಹಿಂದೆ ರಾಜ್ಯದ ಗಲ್ಲ ಗಲ್ಲಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿದ್ದರು. ಅದನ್ನು ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಸಂಪೂರ್ಣ ಬಂದ್ ಮಾಡಿದರು. ಸಾರಾಯಿ ಬಂದ್ ಮಾಡಿದ ಕೀರ್ತಿ ಯಡಿಯೂರಪ್ಪ ಹಾಗೂ ಬಿಜೆಪಿಗೆ ಸಲ್ಲುತ್ತದೆ. ಪರಿವಾರದ ವ್ಯವಸ್ಥೆಯಿಂದ ಬಂದ ನಾವು, ಹೊಸದಾಗಿ ಮದ್ಯದ ಅಂಗಡಿ ತೆರೆಯುವ ಕೆಲಸ ಮಾಡಲ್ಲ. ಇನ್ನು ಅಂತಹ ಅಂಗಡಿಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next