Advertisement

ಡಿಸಿಎಂ ಸ್ಥಾನ ತ್ಯಾಗಕ್ಕೆ ಸಿದ್ಧ: ಕಾರಜೋಳ

11:32 PM Jan 28, 2020 | Lakshmi GovindaRaj |

ಚಿಕ್ಕಮಗಳೂರು: ಪಕ್ಷದ ಮುಖಂಡರು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದರೆ ಹುದ್ದೆ ತ್ಯಾಗಕ್ಕೆ ಸಿದ್ಧ ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಪುನರುಚ್ಚರಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ.

Advertisement

ರಾಜೀನಾಮೆ ನೀಡೋದು, ಬಿಡೋದು ಪಕ್ಷದ ಆಂತರಿಕ ವಿಚಾರ. ಪ್ರಧಾನಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಸೇರಿ ಈ ಬಗ್ಗೆ ಚರ್ಚೆ ಮಾಡುತ್ತಾರೆ. ಪಕ್ಷ ಏನೇ ನಿರ್ಣಯ ತೆಗೆದುಕೊಂಡರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಮುಖಂಡರು ಉಪ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ಸೂಚಿಸಿದರೆ ಸ್ಥಳದಲ್ಲೇ ಸರ್ಕಾರಿ ಕಾರನ್ನು ವಾಪಸ್‌ ಕಳಿಸಿ ಬಸ್‌ನಲ್ಲಿ ಹೋಗಲು ಸಿದ್ಧ ಎಂದರು.

ಕೆಲವರು ಉಪ ಮುಖ್ಯಮಂತ್ರಿ, ಮಂತ್ರಿ ಸ್ಥಾನ ತಮಗೆ ಕೊಡಿ ಎಂದು ಕೇಳಿದ್ದಾರೆ. ಇವೆಲ್ಲ ಸಾಮಾನ್ಯ ಬೇಡಿಕೆಗಳು. ಅದನ್ನು ಪರಿಗಣಿಸೋದು, ಬಿಡೋದು ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ. ಸೋತವರಿಗೆ ಸ್ಥಾನಮಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಿಎಂಗೆ ಹೈಕಮಾಂಡ್‌ ಸಂಪೂರ್ಣ ಸ್ವಾತಂತ್ರ ನೀಡಿದೆ. ಇಲ್ಲದಿದ್ದರೆ ಅವರನ್ಯಾಕೆ ಮುಖ್ಯಮಂತ್ರಿ ಮಾಡುತ್ತಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next